ಮಹಿಳೆಯ ಭೀಕರ ಹತ್ತೆಯಾಗಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ದೇವರುಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾಗಿರುವ ಮೃತ ದೇಹ ಮನೆಯ ಬಾಗಿಲಿನಲ್ಲಿ ರಕ್ತದ ಮಡಿಲಿನಲ್ಲಿ ಪತ್ತೆಯಾಗಿದೆ.
ಪದ್ಮಮ್ಮ ಕೊಲೆಯಾಗಿರುವ ಮಹಿಳೆ. ಗಂಡನೇ ಕೊಲೆ ಮಾಡಿರುವ ಶಂಕೆವ್ಯಕ್ತವಾಗಿದೆ. ಜಮೀನಿನ ವಿಚಾರವಾಗಿ ಆಗಾಗ ಗಂಡ ಹೆಂಡತಿ ನಡುವೆ ಜಗಳ ಆಗುತ್ತಿತ್ತು ಎನ್ನಲಾಗಿದೆ.
ಪದ್ಮಮ್ಮ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇಂದು ಬೆಳಗಿನ ಜಾವ 6ಗಂಟೆ ಸಮಯದಲ್ಲಿ ಮನೆಯ ಬಾಗಿಲ ಮುಂದೆ ಭೀಕರ ಹತ್ಯೆಯಾಗಿ ಬಿದ್ದಿರುವ ದೃಶ್ಯ ಕಂಡುಬಂದಿದೆ.
ಮಚ್ಚು-ಲಾಂಗು ಸೇರಿದಂತೆ ಮಾರಕಸ್ತ್ರಗಳಿಂದ ತಲೆ, ಕೈ ಕತ್ತರಿಸಿ ವಿಕೃತಿ ಮೆರೆಯಲಾಗಿದೆ.
ಸದ್ಯ ಮೃತಳ ಗಂಡನ ಎರಡನೇ ಹೆಂಡತಿ ಮಂಜುಳ ಹಾಗೂ ಮಗ ಪರಾರಿಯಾಗಿದ್ದು, ಗಂಡ ಮುನಿರೆಡ್ಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…