ಮಹಿಳೆಯ ಭೀಕರ ಹತ್ತೆಯಾಗಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ದೇವರುಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೊಣ್ಣೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾಗಿರುವ ಮೃತ ದೇಹ ಮನೆಯ ಬಾಗಿಲಿನಲ್ಲಿ ರಕ್ತದ ಮಡಿಲಿನಲ್ಲಿ ಪತ್ತೆಯಾಗಿದೆ.
ಪದ್ಮಮ್ಮ ಕೊಲೆಯಾಗಿರುವ ಮಹಿಳೆ. ಗಂಡನೇ ಕೊಲೆ ಮಾಡಿರುವ ಶಂಕೆವ್ಯಕ್ತವಾಗಿದೆ. ಜಮೀನಿನ ವಿಚಾರವಾಗಿ ಆಗಾಗ ಗಂಡ ಹೆಂಡತಿ ನಡುವೆ ಜಗಳ ಆಗುತ್ತಿತ್ತು ಎನ್ನಲಾಗಿದೆ.
ಪದ್ಮಮ್ಮ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇಂದು ಬೆಳಗಿನ ಜಾವ 6ಗಂಟೆ ಸಮಯದಲ್ಲಿ ಮನೆಯ ಬಾಗಿಲ ಮುಂದೆ ಭೀಕರ ಹತ್ಯೆಯಾಗಿ ಬಿದ್ದಿರುವ ದೃಶ್ಯ ಕಂಡುಬಂದಿದೆ.
ಮಚ್ಚು-ಲಾಂಗು ಸೇರಿದಂತೆ ಮಾರಕಸ್ತ್ರಗಳಿಂದ ತಲೆ, ಕೈ ಕತ್ತರಿಸಿ ವಿಕೃತಿ ಮೆರೆಯಲಾಗಿದೆ.
ಸದ್ಯ ಮೃತಳ ಗಂಡನ ಎರಡನೇ ಹೆಂಡತಿ ಮಂಜುಳ ಹಾಗೂ ಮಗ ಪರಾರಿಯಾಗಿದ್ದು, ಗಂಡ ಮುನಿರೆಡ್ಡಿ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…