ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು, ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಹೇಳಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

9 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

17 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago