ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು, ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಹೇಳಿದರು.

Ramesh Babu

Journalist

Recent Posts

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

46 minutes ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

2 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

16 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

18 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

21 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 day ago