ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ.98 ರಷ್ಟು ಅರ್ಜಿಗಳನ್ನು ವಿಲೇವಾರಿ

ನವೆಂಬರ್‌ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ‌ ಸಿದ್ದರಾಮಯ್ಯ ಹೇಳಿದರು.

ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು, ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದರು.

ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿಯೂ ಜನಸ್ಪಂದನ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಇಲ್ಲಿ ಬಗೆಹರಿಯದ ಸಮಸ್ಯೆಗಳನ್ನು ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಜನರು ಸಲ್ಲಿಸಬಹುದಾಗಿದೆ. ಕಾನೂನುಬದ್ಧವಾದ ಸಮಸ್ಯೆಗಳಿಗೆ ನಮ್ಮ ಸರ್ಕಾರ ಪರಿಹಾರ ಒದಗಿಸಲಿದೆ ಎಂದು ತಿಳಿಸಿದರು.

ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ಆಡಳಿತ ವ್ಯವಸ್ಥೆ ಚುರುಕುಗೊಳ್ಳಬೇಕು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸರ್ಕಾರ ರೂಪಿಸುವ ಜನೋಪಯೋಗಿ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ತಲುಪಬೇಕು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ತಿಂಗಳೊಳಗಾಗಿ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದರು.

ನಾವು ಸಂವಿಧಾನದಲ್ಲಿ, ಬಸವಾದಿ ಶರಣರಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಮಾಜದಲ್ಲಿ ಭ್ರಾತೃತ್ವ ಬೆಳೆಯಬೇಕು, ಸಮಾನತೆ ಮೂಡಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ, ನೆಮ್ಮದಿ ಕಾಪಾಡಲು ಸಾಧ್ಯ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದ್ದರೆ ಬಂಡವಾಳ ಹೂಡಿಕೆ ಸಾಧ್ಯವಾಗುತ್ತದೆ. ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ-ಬದಲಾವಣೆ ತರಲು ಜನಸ್ಪಂದನ ಅಗತ್ಯ ಎಂದು ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

13 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

15 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago