ನವೆಂಬರ್ 27 ರಂದು ನಡೆದ ಮೊದಲ ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಅರ್ಜಿಗಳ ಪೈಕಿ ಶೇ. 98 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಿ, ಜನರಿಗೆ ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು, ಸರ್ಕಾರವನ್ನು ಜನರ ಬಳಿಗೇ ಒಯ್ಯಬೇಕೆಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈವರೆಗೆ ಒಟ್ಟು 108 ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿದ್ದಾರೆ ಎಂದರು.
ಸಮಸ್ಯೆ ಬಗೆಹರಿಸಲು ಕಾನೂನು ತೊಡಕು ಇದ್ದಲ್ಲಿ, ಈ ಕುರಿತು ಅರ್ಜಿದಾರರಿಗೆ ಕಾರಣ ಸಹಿತ ಹಿಂಬರಹ ನೀಡಲಾಗುವುದು. ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳಿಗೆ ಮೂರು ತಿಂಗಳೊಳಗೆ ವಿಲೇವಾರಿ ಮಾಡಬೇಕು, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.
ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಯೋಜನೆ ಜಾರಿಗೊಳಿಸಿದಾಗ ವಿರೋಧ ಪಕ್ಷಗಳ ನಾಯಕರು ಈಗ ಯೋಜನೆ ಜಾರಿಗೊಳಿಸಿ ಆಮೇಲೆ ನಿಲ್ಲಿಸುತ್ತಾರೆ ಎಂದಿದ್ದರು. ಆದರೆ ಇಂತಹ ಅಪಪ್ರಚಾರಗಳಿಗೆ ಕಿವಿಗೊಡಬಾರದು. ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮ, ಅಸಮಾನತೆ ನಿವಾರಿಸುವ ಕಾರ್ಯಕ್ರಮ ಎಂದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…