ಮೊದಲ ಹಂತದ ಗಿನ್ನಿಸ್ ದಾಖಲಿಸಿದ “ದೇವರ ಆಟ ಬಲ್ಲವರಾರು” ಚಿತ್ರ ತಂಡ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಲು ಮುಂದಾದ “ದೇವರ ಆಟ ಬಲ್ಲವರಾರು ಚಿತ್ರ ತಂಡ”ಕ್ಕೆ ಮೊದಲ ಹಂತ ಗಿನ್ನಿಸ್ ಯಶಸ್ಸು ಲಭಿಸಿದೆ. ಇದರ ಪೂರ್ತಿ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯುವುದರಿಂದ ಕಂಪ್ಲೀಟ್ ಸೆಟ್ ಇಲ್ಲಿಯೇ ಮಾಡಲಾಗಿದೆ.

36 ಗಂಟೆಯ ಟೈಮ್ ಲೈನ್ ಇಟ್ಟುಕೊಂಡು ಸೆಟ್ ವರ್ಕ್ ಆರಂಭಿಸಿದ ಚಿತ್ರ ತಂಡ ಕೇವಲ 22 ಗಂಟೆ 34 ನಿಮಿಷ 58 ಸೆಕೆಂಡ್‌ನ ನಿಗದಿತ ಸಮಯಕ್ಕಿಂತ ಮೊದಲೆ ಮುಗಿಸಿ ಗಿನ್ನಿಸ್ ಮೊದಲ ಹಂತ ಕಂಪ್ಲಿಟ್ ಮಾಡಿ ಗೆಲುವಿನ ನಗೆಬೀರಿದೆ.

ಚೆನ್ನೈನ ಆರ್ಟ್ ಡೈರೆಕ್ಟರ್ ರಾಷ್ಟ್ರ ಪ್ರಶಸ್ತಿ ವಿಜೇತ ತೆಲುಗಿನ “ಪರದೇಶಿ” ಸಿನಿಮಾ ಖ್ಯಾತಿಯ ಬಾಲಚಂದ್ರನ್ ರವರು ಈ ಸೆಟ್ ನಿರ್ಮಾಣ ಮಾಡಿದ್ದು, ನಿಗದಿತ ಸಮಯಕ್ಕೆ ಮೊದಲೇ ನಿರ್ಮಿಸಿ ದಾಖಲೆ ಸೃಷ್ಟಿಸಿದ್ದಾರೆ.

“ಪಿರಂಗಿಪುರ” ಸಿನಿಮಾ ಖ್ಯಾತಿಯ ನಿರ್ದೇಶಕ ಜನಾರ್ದನ್.ಪಿ ಜಾನಿ ಈ ಸಿನಿಮ ನಿರ್ದೇಶನ ಮಾಡಿತ್ತಿದ್ದು, ಮೊದಲ ಹಂತ ಸೆಟ್ ವರ್ಕ್ ಕಂಪ್ಲಿಟ್ ಮಾಡಿದ್ದಾರೆ. ನಿನ್ನೆ ಬೆಳಗ್ಗೆ 10ಗಂಟೆಗೆ ಗಿನ್ನಿಸ್ ಪ್ರಕ್ರಿಯೆಗೆ ಸಹಿಹಾಕಿದ್ದರು. 36 ಗಂಟೆಯ ಟೈಮ್ ಲೈನ್ ಇಟ್ಟುಕೊಂಡು ಆರಂಭಿಸಿದ ಚಿತ್ರತಂಡ ಕೇವಲ 22 ಗಂಟೆಯಲ್ಲಿ ಕಂಪ್ಲಿಟ್ ಮಾಡಿ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.

ಸೆಟ್ ವರ್ಕ್ ನಲ್ಲಿ 170 ಜನಗಳನ್ನೊಳಗೊಂಡ ತಂಡ ಹಗಲು-ರಾತ್ರಿ ಶ್ರಮಿಸಿ ವೇಗವಾಗಿ ಕಂಪ್ಲಿಟ್ ಮಾಡಿ ದಾಖಲೆ ಸೃಷ್ಟಿಸಿದೆ. 150 ಎಕರೆ ಜಾಗದಲ್ಲಿ 150×80 ಅಡಿ ಉದ್ದ ಮತ್ತು ಅಗಲ 19 ಅಡಿ ಎತ್ತರ ವಿಸ್ತೀರ್ಣದ ಬಹುದೊಡ್ಡ ಸೆಟ್ ನಿರ್ಮಾಣ ಮಾಡಲಾಗಿದೆ.

ಬಿಗ್ ಬಾಸ್ ಖ್ಯಾತಿಯ ಅರ್ಜುನ್ ರಮೇಶ್ ನಾಯಕ ನಟನಾಗಿ ಮತ್ತು ಸಿಂಧು ಲೋಕನಾಥ್ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾ ವರ್ಷ ವಿಶ್ವನಾಥ್, ಸಂಪತ್ ರಾಮ್ ಅರ್ಜುನ್, ಮೇದಿನಿ ಕೆಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಪ್ರಿಸ್ವಸ್ ಸ್ಟುಡಿಯೋಸ್ ಬ್ಯಾನರ್ ನಡಿ ಮೂಡಿ ಬರ್ತಾ ಇರೋ ಈ ಸಿನಿಮಾ ವಿಶ್ವದಾದ್ಯಂತ ತೆರೆ ಕಾಣಲು ಪ್ಲಾನ್ ಮಾಡಿಕೊಂಡಿದೆ. ಈ ಸಿನಿಮಾಕ್ಕಾಗಿ ಕಳೆದು ಒಂದು ವರ್ಷದಿಂದ ತಯಾರಿ ನಡೆಸಿ ನಾಯಕ ನಟ ಅರ್ಜುನ್ ರಮೇಶ್ ಪಾತ್ರಕ್ಕಾಗಿ 14 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಮೂರು ವರ್ಷಗಳ ಬಳಿಕ ಕನ್ನಡ ಚಿತ್ರರಂಗ ಕಂಬ್ಯಾಕ್ ಮಾಡಿದ ಸಿಂಧು ಲೋಕನಾಥ್ ಆರು ತಿಂಗಳಿನಿಂದ ಚಿತ್ರಕ್ಕಾಗಿ ತಾಲೀಮು ನಡೆಸಿದ್ದಾರೆ.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

7 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

7 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

15 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago