ಮೊದಲ ಹಂತದ ಗಿನ್ನಿಸ್ ದಾಖಲಿಸಿದ “ದೇವರ ಆಟ ಬಲ್ಲವರಾರು” ಚಿತ್ರ ತಂಡ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಲು ಮುಂದಾದ “ದೇವರ ಆಟ ಬಲ್ಲವರಾರು ಚಿತ್ರ ತಂಡ”ಕ್ಕೆ ಮೊದಲ ಹಂತ ಗಿನ್ನಿಸ್ ಯಶಸ್ಸು ಲಭಿಸಿದೆ. ಇದರ ಪೂರ್ತಿ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯುವುದರಿಂದ ಕಂಪ್ಲೀಟ್ ಸೆಟ್ ಇಲ್ಲಿಯೇ ಮಾಡಲಾಗಿದೆ.

36 ಗಂಟೆಯ ಟೈಮ್ ಲೈನ್ ಇಟ್ಟುಕೊಂಡು ಸೆಟ್ ವರ್ಕ್ ಆರಂಭಿಸಿದ ಚಿತ್ರ ತಂಡ ಕೇವಲ 22 ಗಂಟೆ 34 ನಿಮಿಷ 58 ಸೆಕೆಂಡ್‌ನ ನಿಗದಿತ ಸಮಯಕ್ಕಿಂತ ಮೊದಲೆ ಮುಗಿಸಿ ಗಿನ್ನಿಸ್ ಮೊದಲ ಹಂತ ಕಂಪ್ಲಿಟ್ ಮಾಡಿ ಗೆಲುವಿನ ನಗೆಬೀರಿದೆ.

ಚೆನ್ನೈನ ಆರ್ಟ್ ಡೈರೆಕ್ಟರ್ ರಾಷ್ಟ್ರ ಪ್ರಶಸ್ತಿ ವಿಜೇತ ತೆಲುಗಿನ “ಪರದೇಶಿ” ಸಿನಿಮಾ ಖ್ಯಾತಿಯ ಬಾಲಚಂದ್ರನ್ ರವರು ಈ ಸೆಟ್ ನಿರ್ಮಾಣ ಮಾಡಿದ್ದು, ನಿಗದಿತ ಸಮಯಕ್ಕೆ ಮೊದಲೇ ನಿರ್ಮಿಸಿ ದಾಖಲೆ ಸೃಷ್ಟಿಸಿದ್ದಾರೆ.

“ಪಿರಂಗಿಪುರ” ಸಿನಿಮಾ ಖ್ಯಾತಿಯ ನಿರ್ದೇಶಕ ಜನಾರ್ದನ್.ಪಿ ಜಾನಿ ಈ ಸಿನಿಮ ನಿರ್ದೇಶನ ಮಾಡಿತ್ತಿದ್ದು, ಮೊದಲ ಹಂತ ಸೆಟ್ ವರ್ಕ್ ಕಂಪ್ಲಿಟ್ ಮಾಡಿದ್ದಾರೆ. ನಿನ್ನೆ ಬೆಳಗ್ಗೆ 10ಗಂಟೆಗೆ ಗಿನ್ನಿಸ್ ಪ್ರಕ್ರಿಯೆಗೆ ಸಹಿಹಾಕಿದ್ದರು. 36 ಗಂಟೆಯ ಟೈಮ್ ಲೈನ್ ಇಟ್ಟುಕೊಂಡು ಆರಂಭಿಸಿದ ಚಿತ್ರತಂಡ ಕೇವಲ 22 ಗಂಟೆಯಲ್ಲಿ ಕಂಪ್ಲಿಟ್ ಮಾಡಿ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.

ಸೆಟ್ ವರ್ಕ್ ನಲ್ಲಿ 170 ಜನಗಳನ್ನೊಳಗೊಂಡ ತಂಡ ಹಗಲು-ರಾತ್ರಿ ಶ್ರಮಿಸಿ ವೇಗವಾಗಿ ಕಂಪ್ಲಿಟ್ ಮಾಡಿ ದಾಖಲೆ ಸೃಷ್ಟಿಸಿದೆ. 150 ಎಕರೆ ಜಾಗದಲ್ಲಿ 150×80 ಅಡಿ ಉದ್ದ ಮತ್ತು ಅಗಲ 19 ಅಡಿ ಎತ್ತರ ವಿಸ್ತೀರ್ಣದ ಬಹುದೊಡ್ಡ ಸೆಟ್ ನಿರ್ಮಾಣ ಮಾಡಲಾಗಿದೆ.

ಬಿಗ್ ಬಾಸ್ ಖ್ಯಾತಿಯ ಅರ್ಜುನ್ ರಮೇಶ್ ನಾಯಕ ನಟನಾಗಿ ಮತ್ತು ಸಿಂಧು ಲೋಕನಾಥ್ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾ ವರ್ಷ ವಿಶ್ವನಾಥ್, ಸಂಪತ್ ರಾಮ್ ಅರ್ಜುನ್, ಮೇದಿನಿ ಕೆಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಪ್ರಿಸ್ವಸ್ ಸ್ಟುಡಿಯೋಸ್ ಬ್ಯಾನರ್ ನಡಿ ಮೂಡಿ ಬರ್ತಾ ಇರೋ ಈ ಸಿನಿಮಾ ವಿಶ್ವದಾದ್ಯಂತ ತೆರೆ ಕಾಣಲು ಪ್ಲಾನ್ ಮಾಡಿಕೊಂಡಿದೆ. ಈ ಸಿನಿಮಾಕ್ಕಾಗಿ ಕಳೆದು ಒಂದು ವರ್ಷದಿಂದ ತಯಾರಿ ನಡೆಸಿ ನಾಯಕ ನಟ ಅರ್ಜುನ್ ರಮೇಶ್ ಪಾತ್ರಕ್ಕಾಗಿ 14 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಮೂರು ವರ್ಷಗಳ ಬಳಿಕ ಕನ್ನಡ ಚಿತ್ರರಂಗ ಕಂಬ್ಯಾಕ್ ಮಾಡಿದ ಸಿಂಧು ಲೋಕನಾಥ್ ಆರು ತಿಂಗಳಿನಿಂದ ಚಿತ್ರಕ್ಕಾಗಿ ತಾಲೀಮು ನಡೆಸಿದ್ದಾರೆ.

Ramesh Babu

Journalist

Recent Posts

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

2 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

5 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

17 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

19 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

19 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

1 day ago