ಮೊದಲ ಹಂತದ ಗಿನ್ನಿಸ್ ದಾಖಲಿಸಿದ “ದೇವರ ಆಟ ಬಲ್ಲವರಾರು” ಚಿತ್ರ ತಂಡ

ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಲು ಮುಂದಾದ “ದೇವರ ಆಟ ಬಲ್ಲವರಾರು ಚಿತ್ರ ತಂಡ”ಕ್ಕೆ ಮೊದಲ ಹಂತ ಗಿನ್ನಿಸ್ ಯಶಸ್ಸು ಲಭಿಸಿದೆ. ಇದರ ಪೂರ್ತಿ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯುವುದರಿಂದ ಕಂಪ್ಲೀಟ್ ಸೆಟ್ ಇಲ್ಲಿಯೇ ಮಾಡಲಾಗಿದೆ.

36 ಗಂಟೆಯ ಟೈಮ್ ಲೈನ್ ಇಟ್ಟುಕೊಂಡು ಸೆಟ್ ವರ್ಕ್ ಆರಂಭಿಸಿದ ಚಿತ್ರ ತಂಡ ಕೇವಲ 22 ಗಂಟೆ 34 ನಿಮಿಷ 58 ಸೆಕೆಂಡ್‌ನ ನಿಗದಿತ ಸಮಯಕ್ಕಿಂತ ಮೊದಲೆ ಮುಗಿಸಿ ಗಿನ್ನಿಸ್ ಮೊದಲ ಹಂತ ಕಂಪ್ಲಿಟ್ ಮಾಡಿ ಗೆಲುವಿನ ನಗೆಬೀರಿದೆ.

ಚೆನ್ನೈನ ಆರ್ಟ್ ಡೈರೆಕ್ಟರ್ ರಾಷ್ಟ್ರ ಪ್ರಶಸ್ತಿ ವಿಜೇತ ತೆಲುಗಿನ “ಪರದೇಶಿ” ಸಿನಿಮಾ ಖ್ಯಾತಿಯ ಬಾಲಚಂದ್ರನ್ ರವರು ಈ ಸೆಟ್ ನಿರ್ಮಾಣ ಮಾಡಿದ್ದು, ನಿಗದಿತ ಸಮಯಕ್ಕೆ ಮೊದಲೇ ನಿರ್ಮಿಸಿ ದಾಖಲೆ ಸೃಷ್ಟಿಸಿದ್ದಾರೆ.

“ಪಿರಂಗಿಪುರ” ಸಿನಿಮಾ ಖ್ಯಾತಿಯ ನಿರ್ದೇಶಕ ಜನಾರ್ದನ್.ಪಿ ಜಾನಿ ಈ ಸಿನಿಮ ನಿರ್ದೇಶನ ಮಾಡಿತ್ತಿದ್ದು, ಮೊದಲ ಹಂತ ಸೆಟ್ ವರ್ಕ್ ಕಂಪ್ಲಿಟ್ ಮಾಡಿದ್ದಾರೆ. ನಿನ್ನೆ ಬೆಳಗ್ಗೆ 10ಗಂಟೆಗೆ ಗಿನ್ನಿಸ್ ಪ್ರಕ್ರಿಯೆಗೆ ಸಹಿಹಾಕಿದ್ದರು. 36 ಗಂಟೆಯ ಟೈಮ್ ಲೈನ್ ಇಟ್ಟುಕೊಂಡು ಆರಂಭಿಸಿದ ಚಿತ್ರತಂಡ ಕೇವಲ 22 ಗಂಟೆಯಲ್ಲಿ ಕಂಪ್ಲಿಟ್ ಮಾಡಿ ಮೊದಲ ಹಂತದ ಗಿನ್ನಿಸ್ ದಾಖಲಿಸಿದೆ.

ಸೆಟ್ ವರ್ಕ್ ನಲ್ಲಿ 170 ಜನಗಳನ್ನೊಳಗೊಂಡ ತಂಡ ಹಗಲು-ರಾತ್ರಿ ಶ್ರಮಿಸಿ ವೇಗವಾಗಿ ಕಂಪ್ಲಿಟ್ ಮಾಡಿ ದಾಖಲೆ ಸೃಷ್ಟಿಸಿದೆ. 150 ಎಕರೆ ಜಾಗದಲ್ಲಿ 150×80 ಅಡಿ ಉದ್ದ ಮತ್ತು ಅಗಲ 19 ಅಡಿ ಎತ್ತರ ವಿಸ್ತೀರ್ಣದ ಬಹುದೊಡ್ಡ ಸೆಟ್ ನಿರ್ಮಾಣ ಮಾಡಲಾಗಿದೆ.

ಬಿಗ್ ಬಾಸ್ ಖ್ಯಾತಿಯ ಅರ್ಜುನ್ ರಮೇಶ್ ನಾಯಕ ನಟನಾಗಿ ಮತ್ತು ಸಿಂಧು ಲೋಕನಾಥ್ ನಾಯಕಿಯಾಗಿ ನಟಿಸುತ್ತಿರುವ ಈ ಸಿನಿಮಾ ವರ್ಷ ವಿಶ್ವನಾಥ್, ಸಂಪತ್ ರಾಮ್ ಅರ್ಜುನ್, ಮೇದಿನಿ ಕೆಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಪ್ರಿಸ್ವಸ್ ಸ್ಟುಡಿಯೋಸ್ ಬ್ಯಾನರ್ ನಡಿ ಮೂಡಿ ಬರ್ತಾ ಇರೋ ಈ ಸಿನಿಮಾ ವಿಶ್ವದಾದ್ಯಂತ ತೆರೆ ಕಾಣಲು ಪ್ಲಾನ್ ಮಾಡಿಕೊಂಡಿದೆ. ಈ ಸಿನಿಮಾಕ್ಕಾಗಿ ಕಳೆದು ಒಂದು ವರ್ಷದಿಂದ ತಯಾರಿ ನಡೆಸಿ ನಾಯಕ ನಟ ಅರ್ಜುನ್ ರಮೇಶ್ ಪಾತ್ರಕ್ಕಾಗಿ 14 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಮೂರು ವರ್ಷಗಳ ಬಳಿಕ ಕನ್ನಡ ಚಿತ್ರರಂಗ ಕಂಬ್ಯಾಕ್ ಮಾಡಿದ ಸಿಂಧು ಲೋಕನಾಥ್ ಆರು ತಿಂಗಳಿನಿಂದ ಚಿತ್ರಕ್ಕಾಗಿ ತಾಲೀಮು ನಡೆಸಿದ್ದಾರೆ.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

7 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

7 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

10 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

10 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

19 hours ago