KIADB ಭೂಸ್ವಾಧೀನಕ್ಕೆ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ ವಿಫಲವಾಯಿತು.
ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.
ಕೆಐಎಡಿಬಿ ಖರೀದಿಸುವ ಭೂಮಿಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.
ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ ಆರಂಭವಾಯಿತು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ ಮಧ್ಯೆಯೇ ಅಧಿಕಾರಿಗಳು ಸಭೆಯಿಂದ ಹೊರನಡೆದರು.
ಎಕರೆಗೆ 3 ಕೋಟಿ ಪರಿಹಾರ ಆಗ್ರಹ
ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ನೀಡಲು ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ ನಡುವೆ ವಾಗ್ವಾದ ನಡೆಯಿತು.
ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ ಕ್ರಮ ಖಂಡಿಸಿ ರೈತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…