KIADB ಭೂಸ್ವಾಧೀನಕ್ಕೆ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ ವಿಫಲವಾಯಿತು.
ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.
ಕೆಐಎಡಿಬಿ ಖರೀದಿಸುವ ಭೂಮಿಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.
ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ ಆರಂಭವಾಯಿತು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ ಮಧ್ಯೆಯೇ ಅಧಿಕಾರಿಗಳು ಸಭೆಯಿಂದ ಹೊರನಡೆದರು.
ಎಕರೆಗೆ 3 ಕೋಟಿ ಪರಿಹಾರ ಆಗ್ರಹ
ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ನೀಡಲು ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ ನಡುವೆ ವಾಗ್ವಾದ ನಡೆಯಿತು.
ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ ಕ್ರಮ ಖಂಡಿಸಿ ರೈತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…