KIADB ಭೂಸ್ವಾಧೀನಕ್ಕೆ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ ವಿಫಲವಾಯಿತು.
ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.
ಕೆಐಎಡಿಬಿ ಖರೀದಿಸುವ ಭೂಮಿಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.
ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ ಆರಂಭವಾಯಿತು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ ಮಧ್ಯೆಯೇ ಅಧಿಕಾರಿಗಳು ಸಭೆಯಿಂದ ಹೊರನಡೆದರು.
ಎಕರೆಗೆ 3 ಕೋಟಿ ಪರಿಹಾರ ಆಗ್ರಹ
ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ನೀಡಲು ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ ನಡುವೆ ವಾಗ್ವಾದ ನಡೆಯಿತು.
ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ ಕ್ರಮ ಖಂಡಿಸಿ ರೈತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಹೆಚ್…
ದೊಡ್ಡಬೆಳವಂಗಲ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ವತಿಯಿಂದ ಮಾ.31 ರಂದು ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ಛಲೋವನ್ನು ಹಮ್ಮಿಕೊಳ್ಳಲಾಗಿದೆ ಎಂದು…
ನಿಮ್ಮ ವಾರ್ಷಿಕ ಭವಿಷ್ಯ...... ಯಾವುದೇ ರಾಶಿಯವರಾಗಿದ್ದರೂ, ಮನುಷ್ಯರಾಗಿರುವವರಿಗೆ ಮಾತ್ರ........ ಇಂದು ಮಾರ್ಚ್ 29, 2026/2027 ರವರೆಗೆ ಈ ಯುಗಾದಿಯಿಂದ ಪ್ರಾರಂಭವಾಗುವ…