ಮೊದಲ‌ ಹಂತದ KIADB ಭೂಸ್ವಾಧೀನ ಪ್ರಕ್ರಿಯೆ ಸಭೆ; ನಿಖರ ಬೆಲೆ ನಿಗದಿ ಸಂಬಂಧ ಭಾರೀ ಗೊಂದಲ; ರೈತರು, ಅಧಿಕಾರಿಗಳ ಮಧ್ಯೆ ವಾಗ್ವಾದ; ಸಭೆ ವಿಫಲ

KIADB ಭೂಸ್ವಾಧೀನಕ್ಕೆ‍ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ‌ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ‌ ವಿಫಲವಾಯಿತು.

ಮೊದಲ‌ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.‌

ಕೆಐಎಡಿಬಿ ಖರೀದಿಸುವ ಭೂಮಿ‌ಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.

ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ‌ ಆರಂಭವಾಯಿತು.

ಪರಿಸ್ಥಿತಿ‌ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ‌ ಮಧ್ಯೆಯೇ ಅಧಿಕಾರಿಗಳು‌ ಸಭೆಯಿಂದ ಹೊರನಡೆದರು.

ಎಕರೆಗೆ 3 ಕೋಟಿ ಪರಿಹಾರ ಆಗ್ರಹ

ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ‌ನೀಡಲು‌ ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ‌ ನಡುವೆ ವಾಗ್ವಾದ ನಡೆಯಿತು.

ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ‌ ಕ್ರಮ‌ ಖಂಡಿಸಿ ರೈತರು‌ ಡಿಸಿ ಕಚೇರಿ‌ ಎದುರು‌ ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

1 hour ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

3 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

5 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

8 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

19 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

19 hours ago