ಮೊದಲ‌ ಹಂತದ KIADB ಭೂಸ್ವಾಧೀನ ಪ್ರಕ್ರಿಯೆ ಸಭೆ; ನಿಖರ ಬೆಲೆ ನಿಗದಿ ಸಂಬಂಧ ಭಾರೀ ಗೊಂದಲ; ರೈತರು, ಅಧಿಕಾರಿಗಳ ಮಧ್ಯೆ ವಾಗ್ವಾದ; ಸಭೆ ವಿಫಲ

KIADB ಭೂಸ್ವಾಧೀನಕ್ಕೆ‍ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ‌ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ‌ ವಿಫಲವಾಯಿತು.

ಮೊದಲ‌ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.‌

ಕೆಐಎಡಿಬಿ ಖರೀದಿಸುವ ಭೂಮಿ‌ಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.

ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ‌ ಆರಂಭವಾಯಿತು.

ಪರಿಸ್ಥಿತಿ‌ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ‌ ಮಧ್ಯೆಯೇ ಅಧಿಕಾರಿಗಳು‌ ಸಭೆಯಿಂದ ಹೊರನಡೆದರು.

ಎಕರೆಗೆ 3 ಕೋಟಿ ಪರಿಹಾರ ಆಗ್ರಹ

ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ‌ನೀಡಲು‌ ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ‌ ನಡುವೆ ವಾಗ್ವಾದ ನಡೆಯಿತು.

ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ‌ ಕ್ರಮ‌ ಖಂಡಿಸಿ ರೈತರು‌ ಡಿಸಿ ಕಚೇರಿ‌ ಎದುರು‌ ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

10 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

11 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago