KIADB ಭೂಸ್ವಾಧೀನಕ್ಕೆ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ ವಿಫಲವಾಯಿತು.
ಮೊದಲ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.
ಕೆಐಎಡಿಬಿ ಖರೀದಿಸುವ ಭೂಮಿಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.
ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ ಆರಂಭವಾಯಿತು.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ ಮಧ್ಯೆಯೇ ಅಧಿಕಾರಿಗಳು ಸಭೆಯಿಂದ ಹೊರನಡೆದರು.
ಎಕರೆಗೆ 3 ಕೋಟಿ ಪರಿಹಾರ ಆಗ್ರಹ
ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ನೀಡಲು ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ ನಡುವೆ ವಾಗ್ವಾದ ನಡೆಯಿತು.
ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ ಕ್ರಮ ಖಂಡಿಸಿ ರೈತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…