ಮೊದಲ‌ ಹಂತದ KIADB ಭೂಸ್ವಾಧೀನ ಪ್ರಕ್ರಿಯೆ ಸಭೆ; ನಿಖರ ಬೆಲೆ ನಿಗದಿ ಸಂಬಂಧ ಭಾರೀ ಗೊಂದಲ; ರೈತರು, ಅಧಿಕಾರಿಗಳ ಮಧ್ಯೆ ವಾಗ್ವಾದ; ಸಭೆ ವಿಫಲ

KIADB ಭೂಸ್ವಾಧೀನಕ್ಕೆ‍ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ‌ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ‌ ವಿಫಲವಾಯಿತು.

ಮೊದಲ‌ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.‌

ಕೆಐಎಡಿಬಿ ಖರೀದಿಸುವ ಭೂಮಿ‌ಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.

ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ‌ ಆರಂಭವಾಯಿತು.

ಪರಿಸ್ಥಿತಿ‌ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ‌ ಮಧ್ಯೆಯೇ ಅಧಿಕಾರಿಗಳು‌ ಸಭೆಯಿಂದ ಹೊರನಡೆದರು.

ಎಕರೆಗೆ 3 ಕೋಟಿ ಪರಿಹಾರ ಆಗ್ರಹ

ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ‌ನೀಡಲು‌ ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ‌ ನಡುವೆ ವಾಗ್ವಾದ ನಡೆಯಿತು.

ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ‌ ಕ್ರಮ‌ ಖಂಡಿಸಿ ರೈತರು‌ ಡಿಸಿ ಕಚೇರಿ‌ ಎದುರು‌ ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago