ಮೊದಲ‌ ಹಂತದ KIADB ಭೂಸ್ವಾಧೀನ ಪ್ರಕ್ರಿಯೆ ಸಭೆ; ನಿಖರ ಬೆಲೆ ನಿಗದಿ ಸಂಬಂಧ ಭಾರೀ ಗೊಂದಲ; ರೈತರು, ಅಧಿಕಾರಿಗಳ ಮಧ್ಯೆ ವಾಗ್ವಾದ; ಸಭೆ ವಿಫಲ

KIADB ಭೂಸ್ವಾಧೀನಕ್ಕೆ‍ ಸಂಬಂಧಿಸಿ ಬುಧವಾರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಇಲ್ಲಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರೆದಿದ್ದ ಕುಂದಾಣ ಹೋಬಳಿ ರೈತರ‌ ಸಭೆಯು ಗದ್ದಲ, ಗಲಾಟೆಗೆ ಕಾರಣವಾಗಿ‌ ವಿಫಲವಾಯಿತು.

ಮೊದಲ‌ ಹಂತದ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಕುಂದಾಣ ಹೋಬಳಿಯ ಅರುವನಹಳ್ಳಿ, ಭೈರದೇನಹಳ್ಳಿ, ಚಪ್ಪರಹಳ್ಳಿ ಹಾಗೂ ದೊಡ್ಡ ಗೊಲ್ಲಹಳ್ಳಿ ಗ್ರಾಮದಲ್ಲಿ 867 ಎಕರೆ ಭೂಮಿ ಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದೆ.‌

ಕೆಐಎಡಿಬಿ ಖರೀದಿಸುವ ಭೂಮಿ‌ಗೆ ನಿಖರ ಬೆಲೆ ನಿಗದಿಪಡಿಸುವ ಸಂಬಂಧ ಜಿಲ್ಲಾಧಿಕಾರಿ ಆರ್.ಲತಾ ಅವರು ಕೆಐಎಡಿಬಿ ಅಧಿಕಾರಿಗಳು ಹಾಗೂ ರೈತರ ಸಭೆ ಕರೆದಿದ್ದರು.

ಸಭೆ ಆರಂಭವಾಗುತ್ತಲೇ ರೈತರಲ್ಲೇ ಎರಡು ಗುಂಪುಗಳಾಯೊತು. ಕೆಲ ರೈತರು ಭೂಸ್ವಾಧೀನ ವಿರೋಧಿಸಿದರೆ, ಮತ್ತೆ ಕೆಲವರು ದುಬಾರಿ ಪರಿಹಾರ ನೀಡಿದರೆ ಮಾತ್ರ ಭೂಮಿ ನೊಡುವುದಾಗಿ ಹೇಳಿದರು. ಆಗ ರೈತರ ನಡುವೆಯೇ ವಾಗ್ವಾದ, ಜಟಾಪಟಿ‌ ಆರಂಭವಾಯಿತು.

ಪರಿಸ್ಥಿತಿ‌ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ರೈತರ ಗದ್ದಲದ‌ ಮಧ್ಯೆಯೇ ಅಧಿಕಾರಿಗಳು‌ ಸಭೆಯಿಂದ ಹೊರನಡೆದರು.

ಎಕರೆಗೆ 3 ಕೋಟಿ ಪರಿಹಾರ ಆಗ್ರಹ

ಹೋಬಳಿಯ ವ್ಯಾಪ್ತಿಯ ಬಹುತೇಕ ರೈತರು ಭೂಮಿ ‌ನೀಡಲು‌ ನಿರಾಕರಿಸಿದರು. ಮತ್ತೆ ಬೆರಳೆಣಿಕೆ ರೈತರು ಎಕರೆಗೆ 3 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು. ಇದೇ ವಿಷಯಕ್ಕೆ ರೈತರ‌ ನಡುವೆ ವಾಗ್ವಾದ ನಡೆಯಿತು.

ಅಧಿಕಾರಿಗಳು ಯಾವುದೇ ನಿರ್ಧಾರ ಪ್ರಕಟಿಸದೇ ಸಭೆಯಿಂದ ಹೊರನಡೆದ‌ ಕ್ರಮ‌ ಖಂಡಿಸಿ ರೈತರು‌ ಡಿಸಿ ಕಚೇರಿ‌ ಎದುರು‌ ಪ್ರತಿಭಟನೆ ನಡೆಸಿದರು.
ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂಸ್ವಾಧೀನಕಾರಿ ಬಾಳಪ್ಪ ಹಂದಿಗುಂದ ಇತರರು ಭಾಗವಹಿಸಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

12 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago