ಗುಜರಾತ್ನ ಅರವಲ್ಲಿ ಜಿಲ್ಲೆಯಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ಮೊಬೈಲ್ ಫೋನ್ ಕೊಡಿಸುವ ವಿಷಯದಲ್ಲಿ ಪತಿಯೊಂದಿಗೆ ಗಲಾಟೆ ಮಾಡಿಕೊಂಡ ಪತ್ನಿಯೊಬ್ಬಳು ಆವೇಶದಲ್ಲಿ ಪ್ರಾಣವನ್ನೆ ತ್ಯೆಜಿಸಿದ್ದಾಳೆ ಎನ್ನಲಾಗಿದೆ.
ನೇಪಾಳ ಮೂಲದ ಊರ್ಮಿಳಾ ಖಾನನ್ ರಿಜನ್ ಎಂಬ ಮಹಿಳೆ ತನ್ನ ಪತಿ ಮತ್ತು ಮಗುವಿನೊಂದಿಗೆ ಮೊಡಾಸಾದಲ್ಲಿ ವಾಸಿಸುತ್ತಿದ್ದರು. ಈ ದಂಪತಿಗಳು ಅಲ್ಲಿ ಚೈನೀಸ್ ಫಾಸ್ಟ್ ಫುಡ್ ಸೆಂಟರ್ ನಡೆಸುತ್ತಿದ್ದರು. ಕಳೆದ ಕೆಲವು ದಿನಗಳಿಂದ ಊರ್ಮಿಳಾ ಹೊಸ ಮೊಬೈಲ್ ಫೋನ್ ಕೊಡಿಸುವಂತೆ ಪತಿಯನ್ನು ಒತ್ತಾಯಿಸುತ್ತಿದ್ದರು.
ಆದರೆ, ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಪತಿ ಮೊಬೈಲ್ ಕೊಡಿಸಲು ನಿರಾಕರಿಸುತ್ತಾ ಬಂದಿದ್ದರು. ಇದೇ ವಿಷಯವಾಗಿ ಇಬ್ಬರ ನಡುವೆ ತೀವ್ರ ಜಗಳ ನಡೆದಿದೆ. ಜಗಳದ ನಂತರ ಮನನೊಂದ ಊರ್ಮಿಳಾ, ಭವನ್ಪುರದಲ್ಲಿರುವ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ಪ್ರಸ್ತುತ ಮೊಡಾಸಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಒಂದು ಸಣ್ಣ ಹಠ ಮತ್ತು ಆವೇಶದ ನಿರ್ಧಾರ ಒಂದು ಸಂಸಾರವನ್ನೇ ಬೀದಿಗೆ ತಂದಿದೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…