ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆ(ಗಂಗಾಧರಪುರ ಬಡಾವಣೆ)ಯಲ್ಲಿ ನಡೆದಿದೆ…

ಮನೆಯಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಮನೆಯವರು ನೀರನ್ನು ಎರಚಿ ಆಗುವ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ. ನಂತರ ಅಗ್ನಿ ಶಾಮಕ ದಳ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಕ್ಷಣಾರ್ಧದಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ದೌಡಾಯಿಸಿ ಸಂಪೂರ್ಣವಾಗಿ ಹೊಗೆ ಬರುವುದನ್ನು ನಿಂಯತ್ರಣ ಮಾಡಿದ್ದಾರೆ.

ಕೆಲಕಾಲ ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು…

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್ ಆಗುವುದನ್ನು ತಡೆಯುವುದು ಹೇಗೆ

ಮೊಬೈಲ್ ಚಾರ್ಜ್ ಮಾಡುವಾಗ ಶಾರ್ಟ್ ಸರ್ಕಿಟ್ ಆಗುವುದನ್ನು ತಡೆಯಲು, ಗುಣಮಟ್ಟದ ಚಾರ್ಜರ್ ಬಳಸಿ ಮತ್ತು ಚಾರ್ಜಿಂಗ್ ಪೋರ್ಟ್‌ನಲ್ಲಿ ಧೂಳು ಅಥವಾ ತೇವಾಂಶವಿಲ್ಲದಂತೆ ನೋಡಿಕೊಳ್ಳಿ. ಹಾನಿಗೊಳಗಾದ ಕೇಬಲ್‌ಗಳನ್ನು ಬಳಸಬೇಡಿ. ಶಾರ್ಟ್ ಸರ್ಕಿಟ್ ಸಂಭವಿಸಿದರೆ, ತಕ್ಷಣ ಪವರ್ ಆಫ್ ಮಾಡಿ, ಬ್ಯಾಟರಿಯನ್ನು ಪರೀಕ್ಷಿಸಿ ಮತ್ತು ಅಗತ್ಯವಿದ್ದರೆ ವೃತ್ತಿಪರರ ಸಹಾಯ ಪಡೆಯಿರಿ.

ಕಾರಣಗಳು: ಕಳಪೆ ಗುಣಮಟ್ಟದ ಚಾರ್ಜರ್/ಕೇಬಲ್, ಹಾನಿಗೊಳಗಾದ ಚಾರ್ಜಿಂಗ್ ಪೋರ್ಟ್, ನೀರಿನ ತೇವಾಂಶ, ಅಥವಾ ಮದರ್‌ಬೋರ್ಡ್‌ನಲ್ಲಿನ ದೋಷಗಳು.

ಪರಿಹಾರ:ಪವರ್ ಆಫ್ ಮಾಡಿ: ಶಾರ್ಟ್ ಸರ್ಕಿಟ್ ಅನುಮಾನವಿದ್ದರೆ ತಕ್ಷಣ ಫೋನ್ ಸ್ವಿಚ್ ಆಫ್ ಮಾಡಿ.

ಪೋರ್ಟ್ ಪರೀಕ್ಷಿಸಿ: ಚಾರ್ಜಿಂಗ್ ಪೋರ್ಟ್‌ನಲ್ಲಿ ಧೂಳು, ಕಸ ಅಥವಾ ನೀರಿನ ಅಂಶವಿದ್ದರೆ ಸ್ವಚ್ಛಗೊಳಿಸಿ.

ಬ್ಯಾಟರಿ ಪರಿಶೀಲನೆ: ಬ್ಯಾಟರಿ ತೆಗೆಯಬಹುದಾದರೆ, ಅದು ಉಬ್ಬಿದೆಯೇ ಅಥವಾ ಹಾನಿಗೊಳಗಾಗಿದೆಯೇ ಎಂದು ನೋಡಿ.

ಪರಿಣಿತರ ಸಹಾಯ: ಸಮಸ್ಯೆ ಮುಂದುವರಿದರೆ, ಮದರ್‌ಬೋರ್ಡ್‌ನಲ್ಲಿ ಶಾರ್ಟ್ ಸರ್ಕಿಟ್ ಇರಬಹುದು, ತಕ್ಷಣ ರಿಪೇರಿ ಅಂಗಡಿಗೆ ಕರೆದೊಯ್ಯಿರಿ.

ಮುನ್ನೆಚ್ಚರಿಕೆಗಳು:ಮೊಬೈಲ್ ಚಾರ್ಜ್ ಆಗುವಾಗ ಫೋನ್ ಬಳಕೆಯನ್ನು ತಪ್ಪಿಸಿ.

ಫೋನ್ ಅನ್ನು ದಿಂಬಿನ ಅಡಿಯಲ್ಲಿ ಇಟ್ಟು ಚಾರ್ಜ್ ಮಾಡಬೇಡಿ.

ಕಡಿಮೆ ಬೆಲೆಯ ನಕಲಿ ಚಾರ್ಜರ್‌ಗಳನ್ನು ಬಳಸಬೇಡಿ.

ಗಮನಿಸಿ: ಶಾರ್ಟ್ ಸರ್ಕಿಟ್ ಆದಾಗ ಕಿಡಿಗಳು ಬಂದರೆ ಅಥವಾ ಹೊಗೆ ಬಂದರೆ, ತಕ್ಷಣ ಮುಖ್ಯ ಪವರ್ ಸ್ವಿಚ್ ಆಫ್ ಮಾಡಿ ಮತ್ತು ಫೋನ್ ಅನ್ನು ಸುರಕ್ಷಿತವಾಗಿ ದೂರವಿಡಿ.

Ramesh Babu

Journalist

Recent Posts

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

10 minutes ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 hour ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

12 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

21 hours ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago

ತಮಿಳುನಾಡಿನ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಿಸಿ ಹೆಣ್ಮಕ್ಕಳ ಕಣ್ಮಣಿಯಾಗಲು ಹೊರಟ ನಟ, ಟಿವಿಕೆ ಪಕ್ಷದ ಅಧ್ಯಕ್ಷ ವಿಜಯ್

ನಟಿ ತ್ರಿಷಾ ಜತೆ ಅಫೇರ್‌ ಆರೋಪ, ಹೆಂಡ್ತಿ ಡಿವೋರ್ಸ್‌ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್‌ ಮೀಡಿಯಾದಲ್ಲಿ…

1 day ago