ಮೊಬೈಲ್‌ ರಿಪೇರಿ ಮತ್ತು ಸೇವೆ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್‌ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಡಿಸೆಂಬರ್ 20 ರಿಂದ ಪ್ರಾರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್‌ 18 ಆಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್‌ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ 9740982585, 8884554510, 9113880324, 9241482541 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

4 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago