ಕೋಲಾರ: ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು.
ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…