ಕೋಲಾರ: ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು.
ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್, ಮುಂತಾದವರು ಇದ್ದರು.
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…