ಕೋಲಾರ: ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು.
ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್, ಮುಂತಾದವರು ಇದ್ದರು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…