ಕೋಲಾರ: ಮಕ್ಕಳು ಮೈದಾನದಲ್ಲಿ ಆಟವಾಡಿ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಂಡು ತಮ್ಮ ಭವಿಷ್ಯವನ್ನು ರೂಪಿಸಿಕೊಂಡ ಉದಾಹರಣೆಗಳಿವೆ. ಇಂದು ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬಿಟ್ಟು ಕ್ರೀಡೆಗೆ ಹೆಚ್ಚು ಗಮನ ಕೊಡಬೇಕಾಗಿದೆ ಎಂದು ಹಿರಿಯ ವಕೀಲ ಕೆ.ವಿ ಶಂಕರಪ್ಪ ತಿಳಿಸಿದರು.
ನಗರದ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಶನಿವಾರ ಕೋಲಾರ ಖೋ-ಖೋ ಸಂಸ್ಥೆಯ ವತಿಯಿಂದ ಒಂದು ತಿಂಗಳ ಉಚಿತ ಬೇಸಿಗೆ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಮೊಬೈಲ್ನಲ್ಲಿ ಆಟ ಆಡುವುದನ್ನು ನಿಲ್ಲಿಸಿ ಮೈದಾನದಲ್ಲಿ ಆಟವಾಡಲು ಪ್ರೋತ್ಸಾಹಿಸಬೇಕು. ಅಂದಾಗ ಮಕ್ಕಳ ಆರೋಗ್ಯ ವೃದ್ಧಿಯಾಗಲು ಸಾಧ್ಯ. ಕ್ರೀಡೆಗಳಲ್ಲಿ ಸೋಲು, ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ಮನುಷ್ಯನ ಸೋಮಾರಿತನ ಬಿಟ್ಟಾಗ ಮಾತ್ರವೇ ಯಶಸ್ಸು ಕಾಣಲು ಸಾಧ್ಯ ಇವತ್ತು ದಾನಿಗಳ ಸಹಾಯ ಪೋತ್ಸಾಹದಿಂದ ಶಿಬಿರ ನಡೆಯುತ್ತಿದೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು ಮಕ್ಕಳಿಗೆ ಆಹಾರ ಪದ್ದತಿಗಳನ್ನು ಅನುಸರಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಮಾತನಾಡಿ ಕ್ರೀಡೆಯಲ್ಲಿ ಯಶಸ್ಸು ಗಳಿಸಿದಾಗ ಸರ್ಕಾರಿ ಹುದ್ದೆಗಳು ಲಭ್ಯವಿದೆ ಸದೃಢ ದೇಹದಲ್ಲಿ ಸದೃಢ ಮನಸ್ಸಿನಿಂದ ಕ್ರೀಡೆಗಳಲ್ಲಿ ಭಾಗವಹಿಸಿ ಎಲ್ಲರೂ ಗೌರವಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುರೇಶ್ ಸೂರಿ, ರಘು(ಚಿಟ್ಟಿ), ರೈತ ಸಂಘದ ಅಬ್ಬಣಿ ಶಿವಪ್ಪ, ಶ್ರೀಧರ್, ಜಗನ್ನಾಥ್, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…