ಮೊರಾರ್ಜಿ‌ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗೆ ವಿಷದ ಅಂಟು ದ್ರವ ಕುಡಿಸಿ ಕೊಲೆಗೆ ಯತ್ನ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಬಚ್ಚಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ‌ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಗೆ ಕೆಲ ಪುಂಡ ಬಾಲಕರು ವಿಷದ ಅಂಟು ದ್ರವ ಕುಡಿಸಿ ಕೊಲೆಗೆ ಯತ್ನ ಆರೋಪ ಕೇಳಿಬಂದಿದ್ದು, ಘಟನೆ ಮುಚ್ಚಿಹಾಕಲು ಶಾಲೆಯ ಸಿಬ್ಬಂದಿ ಹುನ್ನಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಶಾಲೆಯಲ್ಲಿ 9ನೇ ತರಗತಿ ಓದುತ್ತಿರುವ ನೆಲಮಂಗಲದ ಲೋಹಿತ್ ನಗರದ ವಿದ್ಯಾರ್ಥಿ ನಾಗಾರ್ಜುನ ಎಂಬ ಬಾಲಕನಿಗೆ ಪುಂಡರು ವಿಷದ ಅಂಟು ದ್ರವ ಕುಡಿಸಿದ್ದು, ಬಾಲಕ ಅಸ್ವಸ್ಥಗೊಂಡು ಯಶವಂತಪುರದ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವಸತಿ ಶಾಲೆಯ ಪುಂಡರ ಈ ಕೃತ್ಯವನ್ನು ಮುಚ್ಚಿಹಾಕಲು ವಸತಿ ಶಾಲೆಯ ಪ್ರಾಂಶುಪಾಲರು, ವಾರ್ಡನ್ ಮತ್ತು ಆರೋಗ್ಯ ಸಹಾಯಕಿ ಪ್ರಯತ್ನಿಸಿದ್ದಾರೆ ಎಂದು ಅಸ್ವಸ್ಥ ಬಾಲಕನ ಸಂಬಂಧಿಯಾದ ಬಿ.ಆರ್.ಭಾಸ್ಕರಪ್ರಸಾದ್ ಆರೋಪಿಸಿದ್ದಾರೆ.

ನನ್ನ ಸಹೋದರಿ ಹಾಗೂ ಆಕೆಯ ಪತಿ ಇಬ್ಬರೂ ಮೃತಪಟ್ಟಿದ್ದಾರೆ. ಹಾಗಾಗಿ ನಾಗಾರ್ಜುನನನ್ನು ನಾನೇ ಸಾಕಿಕೊಂಡಿದ್ದೇನೆ. ಕಳೆದ ವರ್ಷ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಾಖಲು ಮಾಡಿದ್ದೆ. ಚೆನ್ನಾಗಿ ಓದುತ್ತಿದ್ದ. ಕಳೆದ ನಾಲ್ಕು ದಿನಗಳ ಹಿಂದೆ ನಾಗಾರ್ಜುನ ಮಲಗಿದ್ದ ವೇಳೆ ನಾಲ್ವರು ಪುಂಡರು ಬಾಯಿಗೆ ಕಳ್ಳಿ ಹಾಲು ಮತ್ತು ಯಾವುದೋ ವಿಷ ಬೀಜದ ರಸ ಕುಡಿಸಿದ್ದಾರೆ ಎಂಬುದು ಅಲ್ಲಿನ‌ ಸಿಬ್ಬಂದಿಯೊಬ್ಬರಿಂದ ತಿಳಿದುಬಂದಿದೆ. ಶಾಲೆಯ ಪ್ರಾಂಶುಪಾಲ, ನಿಲಯಪಾಲಕರನ್ನು ಕೇಳಿದರೆ ಅಂತದ್ದೇನೂ ಆಗಿಲ್ಲ ಎಂಬ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಭಾಸ್ಕರ ಪ್ರಸಾದ್ ದೂರಿದ್ದಾರೆ.

ಬಾಲಕ ನಾಗಾರ್ಜುನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದು, ಶ್ವಾಸಕೋಶ, ಗಂಟಲು, ಕರುಳು ಮತ್ತು ರಕ್ತಕ್ಕೆ ನಂಜು ಉಂಟಾಗಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

ಘಟನೆ ಗೊತ್ತಾಗಿದ್ದು ಹೇಗೆ?

ಮೂರು ದಿನದ ಹಿಂದೆ ವಸತಿ ಶಾಲೆಯಿಂದ ಭಾಸ್ಕರಪ್ರಸಾದ್ ಅವರಿಗೆ ಕರೆ ಬಂದಿದೆ. ಕರೆ ಮಾಡಿದ್ದ ವಸತಿ ಶಾಲೆಯ ಆರೋಗ್ಯ ಸಹಾಯಕಿ, ನಿಮ್ಮ ಹುಡುಗನಿಗೆ ಜ್ವರ ಮತ್ತು ಗಂಟಲು ನೋವಿದೆ. ತುಂಬಾ ಸುಸ್ತಾಗಿದ್ದಾನೆ. ಅವನಿಗೆ ಎರಡು ದಿನ ವಿಶ್ರಾಂತಿ ಬೇಕಿದೆ. ಬಂದು ಕರೆದುಕೊಂಡು ಹೋಗಿ ಎಂದು ತಿಳಿಸಿದ್ದಾರೆ. ಅದರಂತೆ ಭಾಸ್ಕರಪ್ರಸಾದ್ ಅವರು ಬಚ್ಚಹಳ್ಳಿಯಲ್ಲಿರುವ ತಮ್ಮ ಸಂಬಂಧಿ ಮಂಜುನಾಥ ಮೂಲಕ ನಾಗಾರ್ಜುನನನ್ನು ಮನೆಗೆ ಕರೆಸಿಕೊಂಡಿದ್ದರು.

ಅಸ್ವಸ್ಥವಾಗಿದ್ದ ನಾಗಾರ್ಜುನನನ್ನು ಯಶವಂತಪುರದ ಖಾಸಗಿ ಆಸ್ಪತ್ರೆ ದಾಖಲಿಸಿ ರಕ್ತ ಪರೀಕ್ಷೆ, ಎಕ್ಸರೇ, ಸ್ಕ್ಯಾನಿಂಗ್ ಮಾಡಿಸಿದಾಗ ಗಂಟಲು, ರಕ್ತ, ಶ್ವಾಸಕೋಶ ಹಾಗೂ ಸಣ್ಣ ಕರುಳಿನಲ್ಲಿ ನಂಜು ಹರಡಿದೆ.
ಶ್ವಾಸಕೋಶದಲ್ಲಿ ಕಫದಂತಹ ವಸ್ತು ಸೇರಿ ಉಸಿರಾಟ ಸಮಸ್ಯೆ ಆಗಿದೆ‌. ನಾಗಾರ್ಜುನ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿರುವ ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಈ ಬಗ್ಗೆ ಪ್ರಾಂಶುಪಾಲರಿಗೆ ತಿಳಿಸಲು ನನ್ನ ಸಂಬಂಧಿ ಮಂಜುನಾಥ ವಸತಿ ಶಾಲೆಗೆ ಹೋದಾಗ ಮಗುವಿನ ಅನಾರೋಗ್ಯದ ಹಿಂದಿನ ನಿಜವಾದ ಕಾರಣ ತಿಳಿದುಬಂದಿದೆ. ಜೊತೆಗೆ ನಾಗಾರ್ಜುನ ಕೂಡ ಭಯದಿಂದಲೇ ಘಟನೆ ವಿವರಿಸಿದ. ಆದ್ದರಿಂದ ನಮ್ಮ ಮಗುವಿಗೆ ನ್ಯಾಯ ಮತ್ತು ರಕ್ಷಣೆ ಕೊಡಿಸಬೇಕು ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ಸೋಮವಾರ(ಇಂದು) ದೂರು ಸಲ್ಲಿಸಲಿದ್ದೇನೆ ಎಂದು ಭಾಸ್ಕರಪ್ರಸಾದ್ ತಿಳಿಸಿದ್ದಾರೆ.

ಪೊಲೀಸ್ ಠಾಣೆ ಎದುರು‌ ಪ್ರತಿಭಟನೆ ಇಂದು

ವಸತಿ ಶಾಲೆಯ ಪ್ರಾಂಶುಪಾಲ, ವಾರ್ಡನ್ ಹಾಗೂ ಆರೋಗ್ಯ ಸಹಾಯಕಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ಅಹಿಂದ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸಂಚಲನಾ‌ಸಮಿತಿಯ ಪ್ರೊ.ಹರಿರಾಮ್ ತಿಳಿಸಿದ್ದಾರೆ.

Ramesh Babu

Journalist

Recent Posts

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

1 hour ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

5 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

6 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

8 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

8 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

12 hours ago