ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಸಾವಿರಾರು ಭಕ್ತರು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ಇಮಾಮ್ ಹುಸೇನ್ ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.
ಧರ್ಮಗುರುಗಳ ನೇತೃತ್ವದಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಬ್ಲೇಡ್, ಕತ್ತಿ ಸೇರಿದಂತೆ ಹರಿತ ಆಯುಧಗಳಿಂದ ತಮ್ಮ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಾರ್ಪಣೆ ಮಾಡಿ ತಮ್ಮ ಭಕ್ತಿ ಹಾಗೂ ಹರಕೆಯನ್ನು ಸಮರ್ಪಿಸಿದರು.
ಮೊಹರಂ ನಂತರದ ಏಳನೇ ದಿನ ನಡೆಯುವ ಈ ವಿಶಿಷ್ಟ ಆಚರಣೆಗೆ ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿದ್ದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಭಕ್ತರು ಪಾಲ್ಗೊಂಡಿದ್ದರು.
ನಗರದ ಕಿಲ್ಲಾ ಮಸೀದಿಯಲ್ಲಿ ಅಂಜುಮನ್-ಎ-ಹೈದರಿಯ ಸಂಘಟನೆಯ ನೇತೃತ್ವದಲ್ಲಿ ಹಾಗೂ ಹುಸೇನ್ ಕಮಿಟಿಯ ಸಹಯೋಗದಲ್ಲಿ ಈ ಧಾರ್ಮಿಕ ಆಚರಣೆ ಪ್ರತಿವರ್ಷ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆಗೆ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ.
ಕರ್ನಾಟಕದಲ್ಲಿಯೂ ಈ ಸಂಪ್ರದಾಯ ಅತ್ಯಂತ ವೈಭವದಿಂದ ನಡೆಯುವ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದೆ.
ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಭಾವದಿಂದ ನೆರವೇರಿತು.
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…
ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…