ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಸಾವಿರಾರು ಭಕ್ತರು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ಇಮಾಮ್ ಹುಸೇನ್ ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.
ಧರ್ಮಗುರುಗಳ ನೇತೃತ್ವದಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಬ್ಲೇಡ್, ಕತ್ತಿ ಸೇರಿದಂತೆ ಹರಿತ ಆಯುಧಗಳಿಂದ ತಮ್ಮ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಾರ್ಪಣೆ ಮಾಡಿ ತಮ್ಮ ಭಕ್ತಿ ಹಾಗೂ ಹರಕೆಯನ್ನು ಸಮರ್ಪಿಸಿದರು.
ಮೊಹರಂ ನಂತರದ ಏಳನೇ ದಿನ ನಡೆಯುವ ಈ ವಿಶಿಷ್ಟ ಆಚರಣೆಗೆ ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿದ್ದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಭಕ್ತರು ಪಾಲ್ಗೊಂಡಿದ್ದರು.
ನಗರದ ಕಿಲ್ಲಾ ಮಸೀದಿಯಲ್ಲಿ ಅಂಜುಮನ್-ಎ-ಹೈದರಿಯ ಸಂಘಟನೆಯ ನೇತೃತ್ವದಲ್ಲಿ ಹಾಗೂ ಹುಸೇನ್ ಕಮಿಟಿಯ ಸಹಯೋಗದಲ್ಲಿ ಈ ಧಾರ್ಮಿಕ ಆಚರಣೆ ಪ್ರತಿವರ್ಷ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆಗೆ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ.
ಕರ್ನಾಟಕದಲ್ಲಿಯೂ ಈ ಸಂಪ್ರದಾಯ ಅತ್ಯಂತ ವೈಭವದಿಂದ ನಡೆಯುವ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದೆ.
ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಭಾವದಿಂದ ನೆರವೇರಿತು.
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…
ಬೆಂಗಳೂರು: ಹಬ್ಬಗಳ ಸೀಸನ್ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…