ಮೊಹರಂ ಅಂಗವಾಗಿ ಕಿಲ್ಲಾ ಮಸೀದಿಯಲ್ಲಿ ಶಿಯಾ ಮುಸ್ಲಿಮರ ಹಸೇನ್–ಹುಸೇನ್ ಆಚರಣೆ

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಸಾವಿರಾರು ಭಕ್ತರು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿ ಇಮಾಮ್ ಹುಸೇನ್ ಅವರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದರು.

ಧರ್ಮಗುರುಗಳ ನೇತೃತ್ವದಲ್ಲಿ ನಡೆದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಬ್ಲೇಡ್, ಕತ್ತಿ ಸೇರಿದಂತೆ ಹರಿತ ಆಯುಧಗಳಿಂದ ತಮ್ಮ ಎದೆ ಚಚ್ಚಿಕೊಳ್ಳುವ ಮೂಲಕ ರಕ್ತಾರ್ಪಣೆ ಮಾಡಿ ತಮ್ಮ ಭಕ್ತಿ ಹಾಗೂ ಹರಕೆಯನ್ನು ಸಮರ್ಪಿಸಿದರು.

ಮೊಹರಂ ನಂತರದ ಏಳನೇ ದಿನ ನಡೆಯುವ ಈ ವಿಶಿಷ್ಟ ಆಚರಣೆಗೆ ದೇಶದ ವಿವಿಧ ರಾಜ್ಯಗಳಿಂದ ಹಾಗೂ ವಿದೇಶಗಳಿಂದ ಆಗಮಿಸಿದ್ದ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಶಿಯಾ ಮುಸ್ಲಿಂ ಭಕ್ತರು ಪಾಲ್ಗೊಂಡಿದ್ದರು.

ನಗರದ ಕಿಲ್ಲಾ ಮಸೀದಿಯಲ್ಲಿ ಅಂಜುಮನ್-ಎ-ಹೈದರಿಯ ಸಂಘಟನೆಯ ನೇತೃತ್ವದಲ್ಲಿ ಹಾಗೂ ಹುಸೇನ್ ಕಮಿಟಿಯ ಸಹಯೋಗದಲ್ಲಿ ಈ ಧಾರ್ಮಿಕ ಆಚರಣೆ ಪ್ರತಿವರ್ಷ ನಡೆಯುತ್ತಿದ್ದು, ದಕ್ಷಿಣ ಭಾರತದಲ್ಲಿಯೇ ದೊಡ್ಡಬಳ್ಳಾಪುರ ಈ ಆಚರಣೆಗೆ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ.

ಕರ್ನಾಟಕದಲ್ಲಿಯೂ ಈ ಸಂಪ್ರದಾಯ ಅತ್ಯಂತ ವೈಭವದಿಂದ ನಡೆಯುವ ಪ್ರಮುಖ ಸ್ಥಳವೆಂದು ಪರಿಗಣಿಸಲಾಗಿದೆ.

ಆಚರಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಿತ್ತು. ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಭಾವದಿಂದ ನೆರವೇರಿತು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

39 minutes ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

21 hours ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

1 day ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

1 day ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

1 day ago