ಮೋದಿಯವರು ಜಾರಿಗೆ ತಂದಿರುವ ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ-‌ಸಿಎಂ ಸಿದ್ದರಾಮಯ್ಯ

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRCಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ? ಎಂದು ಸವಾಲೆಸೆದರು.

BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದರು.

ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

10 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

11 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

15 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

17 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

20 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

21 hours ago