ಮೋದಿಯವರು ಜಾರಿಗೆ ತಂದಿರುವ ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ-‌ಸಿಎಂ ಸಿದ್ದರಾಮಯ್ಯ

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRCಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ? ಎಂದು ಸವಾಲೆಸೆದರು.

BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದರು.

ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

8 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

8 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

9 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

9 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

11 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

13 hours ago