ಮೋದಿಯವರು ಜಾರಿಗೆ ತಂದಿರುವ ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ-‌ಸಿಎಂ ಸಿದ್ದರಾಮಯ್ಯ

ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRCಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ? ಎಂದು ಸವಾಲೆಸೆದರು.

BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದರು.

ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.

BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

6 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

11 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

12 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

14 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

17 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago