ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRCಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ? ಎಂದು ಸವಾಲೆಸೆದರು.
BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.
ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.
ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದರು.
ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.
BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…