ಮೋದಿಯವರು ಜಾರಿಗೆ ತಂದಿರುವ ಎಲ್ಲಾ ಜನದ್ರೋಹಿ, ಜನ ವಿರೋಧಿ ಯೋಜನೆಗಳಿಗೆ ಕೆ.ಸಿ.ಆರ್ ಮತ್ತು ಬಿ.ಆರ್.ಎಸ್ ಬೆಂಬಲ ನೀಡಿ ತಾವೂ ಜನವಿರೋಧಿ ಆಗಿದ್ದಾರೆ. ಕೆ.ಸಿ.ಆರ್ ಚುನಾವಣೆಯಲ್ಲಿ ಖರ್ಚು ಮಾಡುವ ಹಣ ಪಾಪದ ಹಣ. ಆದರೆ ತೆಲಂಗಾಣ ಜನತೆ BRCಯನ್ನು ಸೋಲಿಸಲು ಸ್ಪಷ್ಟ ತೀರ್ಮಾನ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಾಮರೆಡ್ಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ “ಹಿಂದುಳಿದ ವರ್ಗಗಳ ನಿರ್ಣಯ” ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ನಾವು ಐದು ಗ್ಯಾರಂಟಿಗಳನ್ನು 100 ದಿನಗಳಲ್ಲಿ ಜಾರಿ ಮಾಡಿದ್ದೇವೆ. ತೆಲಂಗಾಣದಲ್ಲೂ ಒಂದು ಬೋನಸ್ ಸೇರಿ ಆರು ಗ್ಯಾರಂಟಿಗಳು 100 ದಿನಗಳಲ್ಲಿ ಜಾರಿ ಆಗುತ್ತವೆ ಎಂದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಿಲ್ಲ ಎಂಬ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಹಸಿ ಹಸಿ ಸುಳ್ಳುಗಳನ್ನು ಯಾರೊಬ್ಬರೂ ನಂಬಬೇಡಿ ಎಂದು ಮನವಿ ಮಾಡುತ್ತೇನೆ. ಕೆ.ಸಿ.ಆರ್ ಅವರೇ, ಕರ್ನಾಟಕ ರಾಜ್ಯಕ್ಕೆ ಬನ್ನಿ. 5 ಗ್ಯಾರಂಟಿ ಯೋಜನೆಗಳ ಸಕ್ಸಸ್ ನೋಡಿ ಬಳಿಕ ಚರ್ಚೆಗೆ ಮಾಡೋಣ. ನನ್ನ ಸವಾಲು ಸ್ವೀಕರಿಸಲು ಸಿದ್ಧರಿದ್ದೀರ? ಎಂದು ಸವಾಲೆಸೆದರು.
BJP ಮತ್ತು BRC ಎರಡೂ ಒಂದೇ. BRS ತೆಲಂಗಾಣದಲ್ಲಿ BJP ಪಕ್ಷದ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆ.ಸಿ.ಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.
ಪ್ರಧಾನಿ ಮೋದಿಯವರು ಹಿಂದುಳಿದವರ ಉದ್ಧಾರಕ್ಕೆ ಅವತಾರ ಎತ್ತಿದವರಂತೆ ಭಾಷಣ ಮಾಡುತ್ತಾರೆ. ಆದರೆ ಅವರು ಪ್ರಧಾನಿ ಆದ 9 ವರ್ಷಗಳಲ್ಲಿ ಹಿಂದುಳಿದವರಿಗೆ, ದಲಿತರ ಉದ್ಧಾರಕ್ಕೆ ಯಾವ ಕಾರ್ಯಕ್ರಮಗಳನ್ನೂ ಜಾರಿ ಮಾಡಲಿಲ್ಲ. ಬದಲಿಗೆ ಹಿಂದುಳಿದವರು ಇನ್ನಷ್ಟು ಹಿಂದುಳಿಯುವಂತೆ ಮಾಡಿದ್ದಾರೆ ಎಂದು ತಿಳಿಸಿದರು.
ಮೋದಿಯವರು ದೇಶದ ಶೇ.4 ರಷ್ಟು ಮೇಲ್ವರ್ಗದ ಜನರ ಉದ್ದಾರಕ್ಕೆ ಮಾತ್ರ ಕೆಲಸ ಮಾಡುತ್ತಾರೆ. ನಾಗಪುರದ ಈ ಶೇ.4 ಜನರ ಪರವಾಗಿ ಹೇಳಿಕೊಟ್ಟ ಕಾರ್ಯಕ್ರಮವನ್ನು ಜಾರಿ ಮಾಡುವುದಷ್ಟೆ ಮೋದಿಯವರ ಕೆಲಸ ಎಂದರು.
ಕೆ.ಸಿ.ಆರ್ ಹತ್ತು ವರ್ಷ ಅಧಿಕಾರದಲ್ಲಿದ್ದೂ ತೆಲಂಗಾಣವನ್ನು ಅಭಿವೃದ್ಧಿ ಮಾರ್ಗದಲ್ಲಿ ಕೊಂಡೊಯ್ಯದೆ ಭ್ರಷ್ಟಾಚಾರದಲ್ಲಿ ಮುಳುಗಿಸಿದರು. ಪ್ರಧಾನಿ ಮೋದಿಯವರು ಈ ಹತ್ತು ವರ್ಷಗಳಲ್ಲಿ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದರು. ಇದನ್ನು ಕರ್ನಾಟಕದ ಜನತೆ ಅರ್ಥ ಮಾಡಿಕೊಂಡರು, ಜಾಗೃತರಾದರು. ತೆಲಂಗಾಣದ ಜನತೆಯೂ ಅರ್ಥ ಮಾಡಿಕೊಳ್ಳಬೇಕಾದ ಸಮಯ ಬಂದಿದೆ ಎಂದು ಹೇಳಿದ್ದಾರೆ.
BJP ತೆಲಂಗಾಣದಲ್ಲಿ 5 ಸೀಟು ಗೆದ್ದರೆ ಅದೇ ಹೆಚ್ಚು. ನರೇಂದ್ರ ಮೋದಿ ನೂರು ಬಾರಿ ತೆಲಂಗಾಣಕ್ಕೆ ಪ್ರಚಾರಕ್ಕೆ ಬಂದರೂ ಇಲ್ಲಿ ಬಿಜೆಪಿ ಗೆಲ್ಲಲ್ಲ. ಬಿಜೆಪಿ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳುತ್ತಾರೆ. ನರೇಂದ್ರ ಮೋದಿ ಅವರು ಕರ್ನಾಟಕಕ್ಕೂ 48 ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದರು. ಅವರು ಪ್ರಚಾರ ಮಾಡಿದ ಜಾಗಗಳಲ್ಲೆಲ್ಲಾ ಬಿಜೆಪಿ ಹೀನಾಯವಾಗಿ ಸೋತಿದೆ ಎಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…