ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದ ಡೂಂಲೈಟ್ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂ ಶಕ್ತಿ ಚಲಪತಿ ಮಾತನಾಡ ಕಳೆದ ಹತ್ತು ವರ್ಷದಿಂದ ದೇಶದಲ್ಲಿ ಮೋದಿಯ ಆಡಳಿತದಿಂದ ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಆಡಳಿತವನ್ನು ದೇಶದ ಜನರು ಮೆಚ್ಚಿ ಮತ್ತೊಮ್ಮೆ ಬಿಜೆಪಿಗೆ ಅವಕಾಶವನ್ನು ದೇಶದ ಜನರು ನೀಡಿದ್ದಾರೆ ಕಾಂಗ್ರೆಸ್ ಪಕ್ಷದ ದುರಾಡಳಿತ ಕೊನೆಗಾಣಿಸಬೇಕಾಗಿದೆ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಎದುರಿಸಲಿದೆ ಎಂದರು
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ದೇಶ ಮುನ್ನಡೆಯಲು ಮೋದಿಯವರು ಪ್ರಧಾನಿಯಾಗಬೇಕು ಎನ್ನುವ ಆಕಾಂಕ್ಷೆಯನ್ನು ದೇಶದ ಜನರು ಇಟ್ಟುಕೊಂಡಿದ್ದರು ಅದರ ಭಾಗಿವಾಗಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮುಂಬರುವ ಸ್ಥಳಿಯ ಸಂಸ್ಥೆಗಳಗೆ ನಡೆಯುವ ಚುನಾವಣೆಯಗಳಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಭರವಸೆ ನೀಡಿದರಲ್ಲದೆ ಕೇಂದ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿಯವರ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರದೆಯೊಂದರ ಮೇಲೆ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು ವಿಜಯೋತ್ಸವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಎರಡು ಪಕ್ಷದ ಮುಖಂಡರಾದ ಅರುಣಮ್ಮ, ರಾಕೇಶ್, ಸಾ.ಮಾ ಬಾಬು, ನಾಮಲ್ ಮಂಜು, ಬಾಲಾಜಿ, ಅಪ್ಪಿ, ಚಂಬೆ ರಾಜೇಶ್, ದಿಂಬ ನಾಗರಾಜಗೌಡ, ಶಿವಕುಮಾರ್, ಮುಂತಾದವರು ಇದ್ದರು
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…