ಕೋಲಾರ: ದೇಶದಲ್ಲಿ ಸತತವಾಗಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಭಾನುವಾರ ಸಂಜೆ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ನಗರದ ಡೂಂಲೈಟ್ ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂ ಶಕ್ತಿ ಚಲಪತಿ ಮಾತನಾಡ ಕಳೆದ ಹತ್ತು ವರ್ಷದಿಂದ ದೇಶದಲ್ಲಿ ಮೋದಿಯ ಆಡಳಿತದಿಂದ ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಆಡಳಿತವನ್ನು ದೇಶದ ಜನರು ಮೆಚ್ಚಿ ಮತ್ತೊಮ್ಮೆ ಬಿಜೆಪಿಗೆ ಅವಕಾಶವನ್ನು ದೇಶದ ಜನರು ನೀಡಿದ್ದಾರೆ ಕಾಂಗ್ರೆಸ್ ಪಕ್ಷದ ದುರಾಡಳಿತ ಕೊನೆಗಾಣಿಸಬೇಕಾಗಿದೆ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದಲ್ಲಿ ಮುಂದಿನ ಎಲ್ಲಾ ಚುನಾವಣೆಗಳನ್ನು ಎದುರಿಸಲಿದೆ ಎಂದರು
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್ ಮಾತನಾಡಿ, ದೇಶ ಮುನ್ನಡೆಯಲು ಮೋದಿಯವರು ಪ್ರಧಾನಿಯಾಗಬೇಕು ಎನ್ನುವ ಆಕಾಂಕ್ಷೆಯನ್ನು ದೇಶದ ಜನರು ಇಟ್ಟುಕೊಂಡಿದ್ದರು ಅದರ ಭಾಗಿವಾಗಿ ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಮುಂಬರುವ ಸ್ಥಳಿಯ ಸಂಸ್ಥೆಗಳಗೆ ನಡೆಯುವ ಚುನಾವಣೆಯಗಳಲ್ಲಿ ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಭರವಸೆ ನೀಡಿದರಲ್ಲದೆ ಕೇಂದ್ರದಲ್ಲಿ ಜೆಡಿಎಸ್ ಪಕ್ಷದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿಯವರ ಸಂಪುಟದಲ್ಲಿ ಸಚಿವ ಸ್ಥಾನ ನೀಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಪರದೆಯೊಂದರ ಮೇಲೆ ಪ್ರಮಾಣವಚನದ ನೇರ ಪ್ರಸಾರ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿತ್ತು ವಿಜಯೋತ್ಸವದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಎರಡು ಪಕ್ಷದ ಮುಖಂಡರಾದ ಅರುಣಮ್ಮ, ರಾಕೇಶ್, ಸಾ.ಮಾ ಬಾಬು, ನಾಮಲ್ ಮಂಜು, ಬಾಲಾಜಿ, ಅಪ್ಪಿ, ಚಂಬೆ ರಾಜೇಶ್, ದಿಂಬ ನಾಗರಾಜಗೌಡ, ಶಿವಕುಮಾರ್, ಮುಂತಾದವರು ಇದ್ದರು
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…