ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…