ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…