ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…