ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…