ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.

ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.

ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.

ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.

ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ,   ಗ್ರಾಮದ ಮುಖಂಡರುಗಳು ಹಾಜರಿದ್ದರು.

Ramesh Babu

Journalist

Recent Posts

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

4 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

5 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

5 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

8 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

10 hours ago