ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…