ದೊಡ್ಡಬಳ್ಳಾಪುರ: ತಾಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮುನಿಆಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ವೇಳೆ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹನುಮಂತಗೌಡ ಮಾತನಾಡಿ, ಹೈನುಗಾರಿಕೆ ಜೊತೆಗೆ ಗುಣಮಟ್ಟದ ಹಾಲು ಡೈರಿಗೆ ಸರಬರಾಜು ಮಾಡುವುದರಿಂದ ಸಂಘಕ್ಕೆ ಹೆಚ್ಚಿನ ಆದಾಯ ಬರಲಿದೆ ಇದರಿಂದ ಉತ್ಪಾದಕರ ಅಗತ್ಯಗಳನ್ನು ಪೂರೈಸಲು ಸಹಾಯವಾಗಲಿದೆ ಎಂದರು.
ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಮಾತನಾಡಿ, ಸಂಘವು ಉತ್ತಮವಾಗಿ ಬೆಳವಣಿಗೆ ಹೊಂದಲು ಎಲ್ಲಾ ನಿರ್ದೇಶಕರು ಪಕ್ಷಾತೀತವಾಗಿ ಸಹಕರಿಸಬೇಕು ಸಂಘದ ಎಲ್ಲಾ ಸದಸ್ಯರ ಸಹಕಾರ ಹಾಗೂ ಗ್ರಾಮದ ಹಿರಿಯ ಮುಖಂಡರ ಬೆಂಬಲ ಸಲಹೆಯನ್ನು ಅನುಸರಿಸಿ ಸಂಘದ ಸರ್ವತೋಮುಖ ಬೆಳೆವಣಿಗೆಗೆ ಶ್ರಮ ವಹಿಸುತ್ತೇನೆ ಎಂದರು.
ಮೋಪರಹಳ್ಳಿ ಹಾಲು ಉತ್ಪಾದಕರ ಸಂಘದಲ್ಲಿ 11 ನಿರ್ದೇಶಕ ಸ್ಥಾನವಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನದ ಮುನಿಆಂಜಿನಪ್ಪ ಮತ್ತು ಉಪಾಧ್ಯಕ್ಷ ಸ್ಥಾನದ ಹನುಮಂತಗೌಡ ವಿರುದ್ಧ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮನಿಆಂಜಿನಪ್ಪ ಅವರು ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಹನುಮಂತಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ನಾಗಭೂಷಣ್ ಘೋಷಿಸಿದರು.
ಈ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ ಮನಿಆಂಜಿನಪ್ಪ ಹಾಗೂ ಉಪಾದ್ಯಕ್ಷ ಹನುಮಂತಗೌಡ ಅವರನ್ನು ಪ್ರಾಂಶುಪಾಲರಾದ ಡಾ.ಎಂ ಚಿಕ್ಕಣ್ಣ ಗ್ರಾಮದ ಮುಖಂಡರುಗಳು ಅಭಿನಂದಿಸಿದರು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮಾರಪ್ಪ ಎಂ, ರಾಮಪ್ಪ, ಮುನಿಕೃಷ್ಣ, ಕೃಷ್ಣಪ್ಪ, ನಾರಾಯಣಪ್ಪ ಎಂ , ಭಾಗ್ಯಮ್ಮ, ಅಕ್ಕಯಮ್ಮ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಗ್ರಾಮದ ಮುಖಂಡರುಗಳು ಹಾಜರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…