ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಮೋರಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಮೃತ ಮಗುವಿನ ಹೆಸರು, ವಿಳಾಸ, ಪೋಷಕರನ್ನು ಹುಡುಕುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಮೃತ ಮಗುವನ್ನು ರುಚಿಕುಮಾರಿ (1) ಎಂದು ಗುರುತಿಸಲಾಗಿದೆ. ಬಿಹಾರ್ ರಾಜ್ಯದ ಸಹರ್ಸ ಜಿಲ್ಲೆಯ ಗೌಡಚಗಡ ಗ್ರಾಮದ ನಿವಾಸಿಗಳಾದ ಪ್ರಮೇಶ್ ಕುಮಾರ್ ಮತ್ತು ವಿಭಾಕುಮಾರಿ ದಂಪತಿಯ ಪುತ್ರಿ ರುಚಿಕುಮಾರಿ. ಕೂಲಿ ಕೆಲಸದ ನಿಮಿತ್ತ ಒಂದು ವಾರದ ಹಿಂದೆಯಷ್ಟೇ ಬಿಹಾರದಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ.
ಇಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಹಾರ್ ರಾಜ್ಯದವರೊಂದಿಗೆ ಇದ್ದರು. ರುಚಿಕುಮಾರಿ ತೀವ್ರತರವಾದ ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ಮೃತಪಟ್ಟಿದೆ. ಪೋಷಕರು ಹೊಸಬರಾಗಿದ್ದ ಕಾರಣ ಮೃತಮಗುವನ್ನು ಎಲ್ಲಿ ಸಂಸ್ಕಾರ ಮಾಡಬೇಕು ಎನ್ನುವುದು ತೋಚದೆ ಮೋರಿಯಲ್ಲಿನ ಅಂಚಿನಲ್ಲಿ ಶಾಲು ಹಾಸಿ ಮಲಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಗುವಿನ ಕತ್ತಿನಲ್ಲಿದ್ದ ತಾಯಿತದಿಂದ ಸಿಕ್ತು ಸಂಪೂರ್ಣ ಮಾಹಿತಿ
ಮೃತ ಮಗುವಿನ ಕತ್ತಿನಲ್ಲಿ ಕಟ್ಟಲಾಗಿದ್ದ ತಾಯಿತವನ್ನು ಸೂಕ್ಷ್ಮವಾಗಿ ಗಮನಿಸಿದ್ದ ಪೊಲೀಸರು, ಉತ್ತರ ಭಾರತದವರೇ ಹೆಚ್ಚಾಗಿ ಈ ತಾಯಿತಗಳನ್ನು ಕತ್ತಿನಲ್ಲಿ ಕಟ್ಟುವುದು ಎನ್ನುವುದರ ಆಧಾರದ ಮೇಲೆ ತನಿಖೆ ಕೈಗೊಂಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಉತ್ತರ ಭಾರತದ ಜನರು ವಾಸಮಾಡುವ ಪ್ರದೇಶಗಳಲ್ಲಿ ಮೃತಮಗುವಿನ ಫೋಟೋದೊಂದಿಗೆ ವಿಚಾರಣೆ ನಡೆಸಿದ್ದರು.
ಫೋಟೋ ಗಮನಿಸಿದ ಬಿಹಾರ್ ರಾಜ್ಯದವರು ಮಗುವಿನ ಪೋಷಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗು ಅನಾರೋಗ್ಯದಿಂದ ಬಳಲುತ್ತಿದ್ದಾಗ ಬಾಶೆಟ್ಟಿಹಳ್ಳಿಯಲ್ಲಿನ ಖಾಸಗಿ ಆಸ್ಪತ್ರೆಗೆ ಪೋಷಕರು ಭಾನುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಗು ಸಂಜೆ ವೇಳೆಗೆ ಮೃತಪಟ್ಟಿದೆ. ಪೋಷಕರು ಮಗುವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಕೊಡಿಸಿಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿವೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…