ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಮೋರಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಮೃತ ಮಗುವಿನ ಹೆಸರು, ವಿಳಾಸ, ಪೋಷಕರನ್ನು ಹುಡುಕುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಮೃತ ಮಗುವನ್ನು ರುಚಿಕುಮಾರಿ (1) ಎಂದು ಗುರುತಿಸಲಾಗಿದೆ. ಬಿಹಾರ್ ರಾಜ್ಯದ ಸಹರ್ಸ ಜಿಲ್ಲೆಯ ಗೌಡಚಗಡ ಗ್ರಾಮದ ನಿವಾಸಿಗಳಾದ ಪ್ರಮೇಶ್ ಕುಮಾರ್ ಮತ್ತು ವಿಭಾಕುಮಾರಿ ದಂಪತಿಯ ಪುತ್ರಿ ರುಚಿಕುಮಾರಿ. ಕೂಲಿ ಕೆಲಸದ ನಿಮಿತ್ತ ಒಂದು ವಾರದ ಹಿಂದೆಯಷ್ಟೇ ಬಿಹಾರದಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ.
ಇಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಹಾರ್ ರಾಜ್ಯದವರೊಂದಿಗೆ ಇದ್ದರು. ರುಚಿಕುಮಾರಿ ತೀವ್ರತರವಾದ ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ಮೃತಪಟ್ಟಿದೆ. ಪೋಷಕರು ಹೊಸಬರಾಗಿದ್ದ ಕಾರಣ ಮೃತಮಗುವನ್ನು ಎಲ್ಲಿ ಸಂಸ್ಕಾರ ಮಾಡಬೇಕು ಎನ್ನುವುದು ತೋಚದೆ ಮೋರಿಯಲ್ಲಿನ ಅಂಚಿನಲ್ಲಿ ಶಾಲು ಹಾಸಿ ಮಲಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಮಗುವಿನ ಕತ್ತಿನಲ್ಲಿದ್ದ ತಾಯಿತದಿಂದ ಸಿಕ್ತು ಸಂಪೂರ್ಣ ಮಾಹಿತಿ
ಮೃತ ಮಗುವಿನ ಕತ್ತಿನಲ್ಲಿ ಕಟ್ಟಲಾಗಿದ್ದ ತಾಯಿತವನ್ನು ಸೂಕ್ಷ್ಮವಾಗಿ ಗಮನಿಸಿದ್ದ ಪೊಲೀಸರು, ಉತ್ತರ ಭಾರತದವರೇ ಹೆಚ್ಚಾಗಿ ಈ ತಾಯಿತಗಳನ್ನು ಕತ್ತಿನಲ್ಲಿ ಕಟ್ಟುವುದು ಎನ್ನುವುದರ ಆಧಾರದ ಮೇಲೆ ತನಿಖೆ ಕೈಗೊಂಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಉತ್ತರ ಭಾರತದ ಜನರು ವಾಸಮಾಡುವ ಪ್ರದೇಶಗಳಲ್ಲಿ ಮೃತಮಗುವಿನ ಫೋಟೋದೊಂದಿಗೆ ವಿಚಾರಣೆ ನಡೆಸಿದ್ದರು.
ಫೋಟೋ ಗಮನಿಸಿದ ಬಿಹಾರ್ ರಾಜ್ಯದವರು ಮಗುವಿನ ಪೋಷಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗು ಅನಾರೋಗ್ಯದಿಂದ ಬಳಲುತ್ತಿದ್ದಾಗ ಬಾಶೆಟ್ಟಿಹಳ್ಳಿಯಲ್ಲಿನ ಖಾಸಗಿ ಆಸ್ಪತ್ರೆಗೆ ಪೋಷಕರು ಭಾನುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಗು ಸಂಜೆ ವೇಳೆಗೆ ಮೃತಪಟ್ಟಿದೆ. ಪೋಷಕರು ಮಗುವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಕೊಡಿಸಿಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿವೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…