ಮೋರಿಯಲ್ಲಿ ಮೃತ ಹೆಣ್ಣು ಮಗು ಪತ್ತೆ ಪ್ರಕರಣ-ಮೃತ ಮಗುವಿನ ಹೆಸರು, ಪೋಷಕರ ಹೆಸರು, ವಿಳಾಸ ಪತ್ತೆ- ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ….

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಮೋರಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಮೃತ ಮಗುವಿನ ಹೆಸರು, ವಿಳಾಸ, ಪೋಷಕರನ್ನು ಹುಡುಕುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಮೃತ ಮಗುವನ್ನು ರುಚಿಕುಮಾರಿ (1) ಎಂದು ಗುರುತಿಸಲಾಗಿದೆ. ಬಿಹಾರ್ ರಾಜ್ಯದ ಸಹರ್ಸ ಜಿಲ್ಲೆಯ ಗೌಡಚಗಡ ಗ್ರಾಮದ ನಿವಾಸಿಗಳಾದ ಪ್ರಮೇಶ್ ಕುಮಾರ್ ಮತ್ತು ವಿಭಾಕುಮಾರಿ ದಂಪತಿಯ ಪುತ್ರಿ ರುಚಿಕುಮಾರಿ. ಕೂಲಿ ಕೆಲಸದ ನಿಮಿತ್ತ ಒಂದು ವಾರದ ಹಿಂದೆಯಷ್ಟೇ ಬಿಹಾರದಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ.

ಇಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಹಾರ್ ರಾಜ್ಯದವರೊಂದಿಗೆ ಇದ್ದರು. ರುಚಿಕುಮಾರಿ ತೀವ್ರತರವಾದ ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ಮೃತಪಟ್ಟಿದೆ. ಪೋಷಕರು ಹೊಸಬರಾಗಿದ್ದ ಕಾರಣ ಮೃತಮಗುವನ್ನು ಎಲ್ಲಿ ಸಂಸ್ಕಾರ ಮಾಡಬೇಕು ಎನ್ನುವುದು ತೋಚದೆ ಮೋರಿಯಲ್ಲಿನ ಅಂಚಿನಲ್ಲಿ ಶಾಲು ಹಾಸಿ ಮಲಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಗುವಿನ ಕತ್ತಿನಲ್ಲಿದ್ದ ತಾಯಿತದಿಂದ ಸಿಕ್ತು ಸಂಪೂರ್ಣ ಮಾಹಿತಿ

ಮೃತ ಮಗುವಿನ ಕತ್ತಿನಲ್ಲಿ ಕಟ್ಟಲಾಗಿದ್ದ ತಾಯಿತವನ್ನು ಸೂಕ್ಷ್ಮವಾಗಿ ಗಮನಿಸಿದ್ದ ಪೊಲೀಸರು, ಉತ್ತರ ಭಾರತದವರೇ ಹೆಚ್ಚಾಗಿ ಈ ತಾಯಿತಗಳನ್ನು ಕತ್ತಿನಲ್ಲಿ ಕಟ್ಟುವುದು ಎನ್ನುವುದರ ಆಧಾರದ ಮೇಲೆ ತನಿಖೆ ಕೈಗೊಂಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಉತ್ತರ ಭಾರತದ ಜನರು ವಾಸಮಾಡುವ ಪ್ರದೇಶಗಳಲ್ಲಿ ಮೃತಮಗುವಿನ ಫೋಟೋದೊಂದಿಗೆ ವಿಚಾರಣೆ ನಡೆಸಿದ್ದರು.

ಫೋಟೋ ಗಮನಿಸಿದ ಬಿಹಾರ್ ರಾಜ್ಯದವರು ಮಗುವಿನ ಪೋಷಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗು ಅನಾರೋಗ್ಯದಿಂದ ಬಳಲುತ್ತಿದ್ದಾಗ ಬಾಶೆಟ್ಟಿಹಳ್ಳಿಯಲ್ಲಿನ ಖಾಸಗಿ ಆಸ್ಪತ್ರೆಗೆ ಪೋಷಕರು ಭಾನುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಗು ಸಂಜೆ ವೇಳೆಗೆ ಮೃತಪಟ್ಟಿದೆ. ಪೋಷಕರು ಮಗುವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಕೊಡಿಸಿಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿವೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

16 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

20 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

23 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago