ಮೋರಿಯಲ್ಲಿ ಮೃತ ಹೆಣ್ಣು ಮಗು ಪತ್ತೆ ಪ್ರಕರಣ-ಮೃತ ಮಗುವಿನ ಹೆಸರು, ಪೋಷಕರ ಹೆಸರು, ವಿಳಾಸ ಪತ್ತೆ- ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ….

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಮೋರಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಮೃತ ಮಗುವಿನ ಹೆಸರು, ವಿಳಾಸ, ಪೋಷಕರನ್ನು ಹುಡುಕುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಮೃತ ಮಗುವನ್ನು ರುಚಿಕುಮಾರಿ (1) ಎಂದು ಗುರುತಿಸಲಾಗಿದೆ. ಬಿಹಾರ್ ರಾಜ್ಯದ ಸಹರ್ಸ ಜಿಲ್ಲೆಯ ಗೌಡಚಗಡ ಗ್ರಾಮದ ನಿವಾಸಿಗಳಾದ ಪ್ರಮೇಶ್ ಕುಮಾರ್ ಮತ್ತು ವಿಭಾಕುಮಾರಿ ದಂಪತಿಯ ಪುತ್ರಿ ರುಚಿಕುಮಾರಿ. ಕೂಲಿ ಕೆಲಸದ ನಿಮಿತ್ತ ಒಂದು ವಾರದ ಹಿಂದೆಯಷ್ಟೇ ಬಿಹಾರದಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ.

ಇಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಹಾರ್ ರಾಜ್ಯದವರೊಂದಿಗೆ ಇದ್ದರು. ರುಚಿಕುಮಾರಿ ತೀವ್ರತರವಾದ ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ಮೃತಪಟ್ಟಿದೆ. ಪೋಷಕರು ಹೊಸಬರಾಗಿದ್ದ ಕಾರಣ ಮೃತಮಗುವನ್ನು ಎಲ್ಲಿ ಸಂಸ್ಕಾರ ಮಾಡಬೇಕು ಎನ್ನುವುದು ತೋಚದೆ ಮೋರಿಯಲ್ಲಿನ ಅಂಚಿನಲ್ಲಿ ಶಾಲು ಹಾಸಿ ಮಲಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಗುವಿನ ಕತ್ತಿನಲ್ಲಿದ್ದ ತಾಯಿತದಿಂದ ಸಿಕ್ತು ಸಂಪೂರ್ಣ ಮಾಹಿತಿ

ಮೃತ ಮಗುವಿನ ಕತ್ತಿನಲ್ಲಿ ಕಟ್ಟಲಾಗಿದ್ದ ತಾಯಿತವನ್ನು ಸೂಕ್ಷ್ಮವಾಗಿ ಗಮನಿಸಿದ್ದ ಪೊಲೀಸರು, ಉತ್ತರ ಭಾರತದವರೇ ಹೆಚ್ಚಾಗಿ ಈ ತಾಯಿತಗಳನ್ನು ಕತ್ತಿನಲ್ಲಿ ಕಟ್ಟುವುದು ಎನ್ನುವುದರ ಆಧಾರದ ಮೇಲೆ ತನಿಖೆ ಕೈಗೊಂಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಉತ್ತರ ಭಾರತದ ಜನರು ವಾಸಮಾಡುವ ಪ್ರದೇಶಗಳಲ್ಲಿ ಮೃತಮಗುವಿನ ಫೋಟೋದೊಂದಿಗೆ ವಿಚಾರಣೆ ನಡೆಸಿದ್ದರು.

ಫೋಟೋ ಗಮನಿಸಿದ ಬಿಹಾರ್ ರಾಜ್ಯದವರು ಮಗುವಿನ ಪೋಷಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗು ಅನಾರೋಗ್ಯದಿಂದ ಬಳಲುತ್ತಿದ್ದಾಗ ಬಾಶೆಟ್ಟಿಹಳ್ಳಿಯಲ್ಲಿನ ಖಾಸಗಿ ಆಸ್ಪತ್ರೆಗೆ ಪೋಷಕರು ಭಾನುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಗು ಸಂಜೆ ವೇಳೆಗೆ ಮೃತಪಟ್ಟಿದೆ. ಪೋಷಕರು ಮಗುವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಕೊಡಿಸಿಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿವೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago