ಮೋರಿಯಲ್ಲಿ ಮೃತ ಹೆಣ್ಣು ಮಗು ಪತ್ತೆ ಪ್ರಕರಣ-ಮೃತ ಮಗುವಿನ ಹೆಸರು, ಪೋಷಕರ ಹೆಸರು, ವಿಳಾಸ ಪತ್ತೆ- ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ….

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಮೋರಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಮೃತ ಮಗುವಿನ ಹೆಸರು, ವಿಳಾಸ, ಪೋಷಕರನ್ನು ಹುಡುಕುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮುನಿಕೃಷ್ಣ, ಮೃತ ಮಗುವನ್ನು ರುಚಿಕುಮಾರಿ (1) ಎಂದು ಗುರುತಿಸಲಾಗಿದೆ. ಬಿಹಾರ್ ರಾಜ್ಯದ ಸಹರ್ಸ ಜಿಲ್ಲೆಯ ಗೌಡಚಗಡ ಗ್ರಾಮದ ನಿವಾಸಿಗಳಾದ ಪ್ರಮೇಶ್ ಕುಮಾರ್ ಮತ್ತು ವಿಭಾಕುಮಾರಿ ದಂಪತಿಯ ಪುತ್ರಿ ರುಚಿಕುಮಾರಿ. ಕೂಲಿ ಕೆಲಸದ ನಿಮಿತ್ತ ಒಂದು ವಾರದ ಹಿಂದೆಯಷ್ಟೇ ಬಿಹಾರದಿಂದ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ.

ಇಲ್ಲಿ ಕೂಲಿಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಿಹಾರ್ ರಾಜ್ಯದವರೊಂದಿಗೆ ಇದ್ದರು. ರುಚಿಕುಮಾರಿ ತೀವ್ರತರವಾದ ಉಸಿರಾಟದ ಸಮಸ್ಯೆಯಿಂದಾಗಿ ಭಾನುವಾರ ಮೃತಪಟ್ಟಿದೆ. ಪೋಷಕರು ಹೊಸಬರಾಗಿದ್ದ ಕಾರಣ ಮೃತಮಗುವನ್ನು ಎಲ್ಲಿ ಸಂಸ್ಕಾರ ಮಾಡಬೇಕು ಎನ್ನುವುದು ತೋಚದೆ ಮೋರಿಯಲ್ಲಿನ ಅಂಚಿನಲ್ಲಿ ಶಾಲು ಹಾಸಿ ಮಲಗಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಮಗುವಿನ ಕತ್ತಿನಲ್ಲಿದ್ದ ತಾಯಿತದಿಂದ ಸಿಕ್ತು ಸಂಪೂರ್ಣ ಮಾಹಿತಿ

ಮೃತ ಮಗುವಿನ ಕತ್ತಿನಲ್ಲಿ ಕಟ್ಟಲಾಗಿದ್ದ ತಾಯಿತವನ್ನು ಸೂಕ್ಷ್ಮವಾಗಿ ಗಮನಿಸಿದ್ದ ಪೊಲೀಸರು, ಉತ್ತರ ಭಾರತದವರೇ ಹೆಚ್ಚಾಗಿ ಈ ತಾಯಿತಗಳನ್ನು ಕತ್ತಿನಲ್ಲಿ ಕಟ್ಟುವುದು ಎನ್ನುವುದರ ಆಧಾರದ ಮೇಲೆ ತನಿಖೆ ಕೈಗೊಂಡಿದ್ದರು. ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಉತ್ತರ ಭಾರತದ ಜನರು ವಾಸಮಾಡುವ ಪ್ರದೇಶಗಳಲ್ಲಿ ಮೃತಮಗುವಿನ ಫೋಟೋದೊಂದಿಗೆ ವಿಚಾರಣೆ ನಡೆಸಿದ್ದರು.

ಫೋಟೋ ಗಮನಿಸಿದ ಬಿಹಾರ್ ರಾಜ್ಯದವರು ಮಗುವಿನ ಪೋಷಕರ ಬಗ್ಗೆ ಮಾಹಿತಿ ನೀಡಿದ್ದಾರೆ. ಮಗು ಅನಾರೋಗ್ಯದಿಂದ ಬಳಲುತ್ತಿದ್ದಾಗ ಬಾಶೆಟ್ಟಿಹಳ್ಳಿಯಲ್ಲಿನ ಖಾಸಗಿ ಆಸ್ಪತ್ರೆಗೆ ಪೋಷಕರು ಭಾನುವಾರ ಮಧ್ಯಾಹ್ನ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಮಗು ಸಂಜೆ ವೇಳೆಗೆ ಮೃತಪಟ್ಟಿದೆ. ಪೋಷಕರು ಮಗುವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಕೊಡಿಸಿಕೊಂಡು ಹೋಗಿರುವ ದೃಶ್ಯಾವಳಿಗಳು ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿವೆ.

Ramesh Babu

Journalist

Recent Posts

ಪ್ರತಿ ಲೀಟರ್ ಹಾಲಿಗೆ 10‌ ರೂ. ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹ: ಜು.9ರಂದು ಸಿಎಂಗೆ ಮನವಿ ಸಲ್ಲಿಕೆ

ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…

1 hour ago

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

7 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

7 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

20 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

21 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

23 hours ago