ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು, ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಮೋರಿ ಸುತ್ತಮುತ್ತ ಕಸ-ತ್ಯಾಜ್ಯ ಸಂಗ್ರಹಗೊಂಡಿರುವ ಪರಿಣಾಮ ಪರಿಸರದಲ್ಲಿ ದುರ್ವಾಸನೆ ಹರಡುತ್ತಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು, ನಿವಾಸಿಗಳು ಹಾಗೂ ಈ ಮಾರ್ಗವಾಗಿ ಸಂಚರಿಸುವ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕಸದ ರಾಶಿಯಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಸೊಳ್ಳೆ ಕಾಟದಿಂದ ಸ್ಥಳೀಯರು ಹೈರಾಣಾಗಿದ್ದಾರೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಸಾರ್ವಜನಿಕರಲ್ಲಿ ಮೂಡಿದೆ.

ತ್ಯಾಜ್ಯವನ್ನು ತೆರವುಗೊಳಿಸಿ, ಸ್ಥಳವನ್ನು ಸ್ವಚ್ಛಗೊಳಿಸುವಂತೆ ಸ್ಥಳೀಯ ನಿವಾಸಿಗಳು ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಲೆಯ ಸಮೀಪವೇ ತ್ಯಾಜ್ಯ ರಾಶಿ ಬಿದ್ದಿರುವುದರಿಂದ ಮಕ್ಕಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುವ ಆತಂಕವಿದೆ. ಕೂಡಲೇ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯವನ್ನು ತೆರವುಗೊಳಿಸುವುದರ ಜೊತೆಗೆ ರಾಜಕಾಲುವೆ ಹಾಗೂ ಮೋರಿಯನ್ನು ಸ್ವಚ್ಛಗೊಳಿಸಿ, ಮತ್ತೆ ಕಸ ಹಾಕದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

4 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

4 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

17 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

20 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

1 day ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

1 day ago