ರಾಜ್ಯದ ಹಲವಾರು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ನಟೋರಿಯಸ್ ಅಪರಾಧಿ ಹೊಟ್ಟೆ ಮಂಜನನ್ನು ಬೆಂಗಳೂರಿನ ಸದಾಶಿವನಗರ ಸಿಗ್ನಲ್ನಲ್ಲಿ ತುಮಕೂರು ಜಿಲ್ಲೆಯ ಕೊರಟಗೆರೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ದೊಡ್ಡಲಿಂಗಯ್ಯನವರು ತನ್ನ ಪ್ರಾಣದ ಹಂಗನ್ನು ಲೆಕ್ಕಿಸದೆ ಬೆನ್ನಟ್ಟಿ ಹಿಡಿದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುಮಾರು 40 ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ ಅಲಿಯಾಸ್ ಹೊಟ್ಟೆ ಮಂಜು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಈ ಹೊಟ್ಟೆ ಮಂಜುನನ್ನು ಸಿನಿಮೀಯ ರೀತಿಯಲ್ಲಿ ಬೈಕ್ ಅಡ್ಡಗಟ್ಟಿದ ಪೊಲೀಸರು ಲಾಕ್ ಮಾಡಿದ್ದಾರೆ. ಆರೋಪಿ ಮಂಜು ಚಿನ್ನಾಭರಣ ಧರಿಸಿರುವ ವೃದ್ಧೆಯರನ್ನೆ ಟಾರ್ಗೆಟ್ ಮಾಡುತ್ತಿದ್ದ. ಪಿಂಚಣಿ, ವೃದ್ದಾಪ್ಯಾವೇತನ, ಪೋಸ್ಟ್ಆಫೀಸ್ಗಳಲ್ಲಿ ಹಣ ಬರೋ ಹಾಗೆ ಮಾಡುತ್ತೇನೆ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ.
ಈ ಸಂಬಂಧ ಕೊರಟಗೆರೆ, ಮಧುಗಿರಿ, ಹೆಬ್ಬೂರು, ಕೋಳಾಲ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೊಬ್ಬರಿ 40 ಕೇಸ್ಗಳು ಈತನ ಮೇಲಿವೆ ಎನ್ನಲಾಗಿದೆ.
ಕೊರಟಗೆರೆ ಠಾಣೆ ಕ್ರೈಂ ಸಿಬ್ಬಂದಿ ದೊಡ್ಡಲಿಂಗಯ್ಯ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಸಿಗ್ನಲ್ ಬಳಿ ಪ್ರಾಣ ಪಣಕ್ಕಿಟ್ಟು ಖದೀಮನನ್ನು ರೋಚಕವಾಗಿ ಲಾಕ್ ಮಾಡಿದ್ದಾರೆ.
ಆರೋಪಿ ಪತ್ತೆ ಹೇಗೆ:-
ಜೂ.20ರಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಟಗೆರೆ ಟೌನ್ ಡಿಸಿಸಿ ಬ್ಯಾಂಕ್ ಬಳಿ ಘಟನೆ ನಡೆದ ನಂತರ ಆರೋಪಿಯನ್ನು ಹಿಂಬಾಲಿಸಿ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗಿ ಆರೋಪಿಯು ದಾಬಸ್ ಪೇಟೆ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಿದ್ದು, ಆರೋಪಿ ಪತ್ತೆಗಾಗಿ ಆರೋಪಿತನ ವಾಹನ ಸಂಖ್ಯೆಯನ್ನು ಅಲರ್ಟ್ ವಾರ್ನಿಂಗ್ ಸೆಂಟರ್ ಗೆ ನಮೂದಿಸಿದ್ದು, ಆರೋಪಿಯ ವಾಹನ ಸಂಖ್ಯೆ ಅಲರ್ಟ್ ಎಚ್ಚರಿಕೆ ಕೇಂದ್ರದ ಇಂಜಿನಿಯರ್ ಸಹಕಾರದೊಂದಿಗೆ ಅಲರ್ಟ್ ಎಚ್ಚರಿಕೆ ಕೇಂದ್ರಕ್ಕೆ ಪ್ರವೇಶಿಸಿದೆ. ಸುಮಾರು 01 ತಿಂಗಳಿನಿಂದ ಸದಾಶಿವನಗರ ಹಾಗೂ ಎಂ.ಎಸ್.ರಾಮಯ್ಯ ಆಸ್ಪತ್ರೆ ಬಳಿ ಕಾದು ಕುಳಿತಿದ್ದ ಕೊರಟಗೆರೆ ಪೊಲೀಸ್ ಠಾಣೆಯ ಸಿಬ್ಬಂದಿ ದೊಡ್ಡಲಿಂಗಯ್ಯನವರಿಗೆ ಆ.6ರಂದು ಬೆಂಗಳೂರು ಕಮಾಂಡ್ ಸೆಂಟರ್ ರವರು ಮಾಹಿತಿ ಬಂದ ಕೂಡಲೇ ಸದಾಶಿವನಗರ ಟ್ರಾಫಿಕ್ ಜಂಕ್ಷನ್ ಬಳಿ ಬಂದು ಆರೋಪಿಯನ್ನು ಹಿಡಿಯಲು ಪ್ರಯತ್ನ ಮಾಡುತ್ತಾರೆ. ದ್ವಿಚಕ್ರ ವಾಹನದಲ್ಲಿ ಬಂದ ಆಸಾಮಿ ವಾಹನ ನಿಲ್ಲಿಸಲಿಲ್ಲ. ಆದರೂ ಆತನನ್ನು ಬಿಡದೇ ಪಟ್ಟಾಗಿ ಹಿಡಿದಕೊಂಡಿದ್ದರು.
ನಂತರ ಸದಾಶಿವನಗರ ಸಂಚಾರ ಠಾಣೆ ಮಹಿಳಾ ಎಎಸ್ಐ ನಾಗಮ್ಮ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ಶ್ರೀಧರ್ ಅವರ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಲಾಯಿತು.
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…