ಮೌಲ್ಯವರ್ಧಿತ ತೆರಿಗೆಯಲ್ಲಿ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಕೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ ಎಂದು ತಿಳಿಸಿದ್ದಾರೆ.

ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ  ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ. ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

4 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

7 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

8 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

10 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

11 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

12 hours ago